ಮಂಡ್ಯ :ಜಿಲ್ಲೆಯಲ್ಲಿ ಮತ್ತೆ ಕೊರೊನಾ ಕಾಟ ಮುಂದುವರೆದಿದೆ. ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಸೇರಿ ವೈದ್ಯರಿಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ 4 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದೆ. ಇನ್ನು ಈ ವಿದ್ಯಾರ್ಥಿಗಳು ಕೋಲ್ಕತ್ತಾ ಮೂಲದವರು ಎಂದು ತಿಳಿದು ಬಂದಿದೆ.
ಡಿ.20ರಂದು ಕೋಲ್ಕತ್ತಾದಿಂದ ಆಗಮಿಸಿದ್ದ 67 ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲಾಗಿತ್ತು. ಅದರಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದ 137 ಜನರಿಗೂ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಸಂಜೆ ಸಂಪರ್ಕಿತರ ರಿಪೋರ್ಟ್ ಬರುವ ಸಾಧ್ಯತೆ ಇದೆ.