ಮಂಡ್ಯ:ಶ್ರೀರಂಗಪಟ್ಟಣದ ಕಾವೇರಿ ನದಿಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಸ್ಥಿ ಬಿಡುತ್ತಿರುವುದನ್ನು ವಿರೋಧಿಸಿ ಗಂಜಾಂ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ರಸ್ತೆಗೆ ಮರದ ತುಂಡುಗಳನ್ನು ಹಾಕಿ ರಸ್ತೆ ತಡೆದಿದ್ದಾರೆ. ಘೋಸಾಯ್ ಘಾಟ್, ಸಂಗಮದಲ್ಲಿ ಪ್ರತಿನಿತ್ಯ ಅಸ್ಥಿ ವಿಸರ್ಜನೆ ಮಾಡಲಾಗುತ್ತಿದೆ. ಆದರೆ, ಕಾವೇರಿ ನದಿಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಸ್ಥಿ ಬಿಡಬಾರದು. ಅಲ್ಲದೆ ಮೃತರ ಸಂಬಂಧಿಕರು ಇಲ್ಲಿಗೆ ಬರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ.