ಮಂಡ್ಯ: ಜಿಲ್ಲೆಯಲ್ಲಿ ಗೂಂಡಾ ರಾಜಕಾರಣ ನಡೆಯಲ್ಲ. ಹೊರ ಜಿಲ್ಲೆಯವರು ಮಂಡ್ಯ ಜಿಲ್ಲೆಗೆ ಬಂದು ಗುಂಪುಗಾರಿಕೆ ಮಾಡಿ, ಗೂಂಡಾ ರಾಜಕಾರಣ ಮಾಡಿದರೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಬಿಜೆಪಿಯ ನೂತನ ಶಾಸಕ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಅಭಿಮಾನಿಗಳಿಂದ ತಮ್ಮ ನಿವಾಸದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಗೂಂಡಾ ರಾಜಕಾರಣ ನಡೆಯೋದಿಲ್ಲ ಎಂಬುದನ್ನು ಜನ ತೋರಿಸಿಕೊಟ್ಟಿದ್ದಾರೆ. ಮಾಜಿ ಸಚಿವ ಹೆಚ್.ಡಿ. ರೇವಣ್ಣರ ಬಗ್ಗೆ ನನಗೆ ಅಪಾರ ಗೌರವವಿದೆ. ಅದನ್ನು ಅವರು ಉಳಿಸಿಕೊಳ್ಳಬೇಕು ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.