ಕರ್ನಾಟಕ

karnataka

ETV Bharat / state

ಮಳೆಗೆ ಬೀದರ್- ಶ್ರೀರಂಗಪಟ್ಟಣ ಹೆದ್ದಾರಿ ಬಂದ್: ನೀರ ಮಧ್ಯೆ ದಾರಿ ತೋರಿಸಿದ ಗ್ರಾಮಸ್ಥರು - ಮಂಡ್ಯ ಮಳೆ ಸುದ್ದಿ

ಮಂಡ್ಯ ಜಿಲ್ಲೆಯಲ್ಲಿನ ಭಾರಿ ಮಳೆಗೆ ಶ್ರೀರಂಗಪಟ್ಟಣ-ಬೀದರ್ ಹೆದ್ದಾರಿ ಸಂಪೂರ್ಣ ಜಲಾವೃತವಾಗಿದೆ.

ಬೀದರ್- ಶ್ರೀರಂಗಪಟ್ಟಣ ಹೆದ್ದಾರಿ ಬಂದ್

By

Published : Oct 22, 2019, 3:00 PM IST

ಮಂಡ್ಯ: ಭಾರಿ ಮಳೆಗೆ ಶ್ರೀರಂಗಪಟ್ಟಣ-ಬೀದರ್ ಹೆದ್ದಾರಿ ಸಂಪೂರ್ಣ ಜಲಾವೃತವಾಗಿದೆ. ಪ್ರಯಾಣಿಕರು ಪರದಾಡುತ್ತಿದ್ದು, ಸ್ಥಳೀಯ ಜನರು ವಾಹನಗಳಿಗೆ ದಾರಿ ಮಾಡಿಕೊಟ್ಟು ಸಹಕರಿಸಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಮುರುಕನಹಳ್ಳಿ ಬಳಿ ನಡೆದಿದೆ.

ಭಾರೀ ಮಳೆಗೆ ಬೀದರ್- ಶ್ರೀರಂಗಪಟ್ಟಣ ಹೆದ್ದಾರಿ ಬಂದ್

ಕಳೆದ ರಾತ್ರಿ ಜೋರು ಮಳೆಗೆ ಹಳ್ಳಗಳು ತುಂಬಿದ್ದು, ಕೆರೆಗಳು ಕೋಡಿ ಬಿದ್ದಿವೆ. ಇದರಿಂದ ಸೇತುವೆ ಮೇಲೆ ನೀರು ಹರಿದು ಬರ್ತಿದೆ. ಹೀಗಾಗಿ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ರಸ್ತೆಯಲ್ಲಿ ನೀರು ತುಂಬಿರುವುದರಿಂದ ವಾಹನ ಚಾಲಕರು ರಸ್ತೆ ಕಾಣದೆ ಪರದಾಡುತ್ತಿದ್ದಾರೆ. ಸ್ಥಳೀಯರು ನೀರಿನ ಮಧ್ಯೆ ದಾರಿ ತೋರಿಸುತ್ತಾ ವಾಹನ ಚಾಲಕರಿಗೆ ನೆರವಾಗುತ್ತಿದ್ದಾರೆ. ಮತ್ತೊಂದು ಕಡೆ ಕೆ.ಆರ್.ಪೇಟೆ ತಾಲ್ಲೂಕಿನ ಹಲವು ಕೆರೆಗಳು ಸಂಪೂರ್ಣ ಭರ್ತಿಯಾಗಿವೆ.

ಇನ್ನು ಕೆರೆ ಕೋಡಿ ಬಿದ್ದಿದ್ದು, ಮತ್ತೆ ಮಳೆ ಬಂದರೆ ಎಲ್ಲಿ ಜಮೀನಿಗೆ ನೀರು ನುಗ್ಗುವುದೋ ಎಂಬ ಆತಂಕ ರೈತರಲ್ಲಿ ಶುರುವಾಗಿದೆ. ಕೆಲವು ಕಡೆ ಹಳ್ಳಗಳು ಮುಚ್ಚಿ ಹೋಗಿದ್ದು, ನೀರು ಎಲ್ಲೆಂದರಲ್ಲಿ ನುಗ್ಗುತ್ತಿದೆ.

ಕೆ.ಆರ್.ಪೇಟೆ ಪಟ್ಟಣದ ಹೊಸಹೊಳಲು ಗ್ರಾಮದಲ್ಲಿ ಮನೆ ಕುಸಿದಿದೆ. ಘಟನೆಯಲ್ಲಿ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ಮನೆ ದುರಸ್ಥಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ABOUT THE AUTHOR

...view details