ಕರ್ನಾಟಕ

karnataka

By

Published : Jan 10, 2020, 11:31 PM IST

ETV Bharat / state

ಅಕ್ರಮ ಗಣಿಗಾರಿಕೆ : 30 ಕ್ವಾರಿಗಳನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಪ್ರಕಟಣೆ

ಮಂಡ್ಯದ ಬೇಬಿ ಬೆಟ್ಟ ಕಾವಲಿನಲ್ಲಿ ಅನಧಿಕೃತ ಗಣಿಗಾರಿಕೆ ಮಾಡುತ್ತಿರುವುದರಿಂದ ಅನುಮತಿಕೊಟ್ಟಂತಹ 22 ಸಿ ಫಾರಂ, 30 ಕ್ರಷರ್ ಹಾಗೂ 30 ಕ್ವಾರಿಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪ್ರಕಟಣೆ ಹೊರಡಿಸಿದ್ದಾರೆ.

illegal-mining-in-mandya
30 ಖ್ವಾರೆಗಳ ರದ್ದುಪಡಿಸಿದ ಜಿಲ್ಲಾಧಿಕಾರಿ

ಮಂಡ್ಯ : ಬೇಬಿ ಬೆಟ್ಟ ಕಾವಲಿನಲ್ಲಿ ಅನಧಿಕೃತ ಗಣಿಗಾರಿಕೆ ಮಾಡುತ್ತಿರುವುದರಿಂದ ಅನುಮತಿಕೊಟ್ಟಂತಹ 22 ಸಿ ಫಾರಂ, 30 ಕ್ರಷರ್ ಹಾಗೂ 30 ಕ್ವಾರಿಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಪ್ರಕಟಣೆ ಹೊರಡಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಹಾಗೂ ಜಲ್ಲಿ ಕಲ್ಲುಪುಡಿ ಘಟಕಗಳ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟ ಗ್ರಾಮದ ವ್ಯಾಪ್ತಿಯ ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆ ಸಂಬಂಧಿಸಿದಂತೆ ಗಣಿಗಾರಿಕೆ ನಿಯಂತ್ರಿಸಲು ಶಾಶ್ವತ ಚೆಕ್ ಪೋಸ್ಟ್‌ಳನ್ನು ನಿರ್ಮಾಣ ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ಹಾಗೂ ಸಾಗಾಣಿಕೆ ನಿಯಂತ್ರಿಸಲು ಪರಿಶೀಲನೆಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು.

ಕಳೆದೆರಡು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಗಣಿಗಾರಿಕೆ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನೆ ಮಾಡಿ ಗಣಿ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಗಣಿಗಾರಿಕೆಗೆ ನೀಡಿದ್ದ ಎಲ್ಲಾ ವಿಧದ ಲೈಸೆನ್ಸ್ ರದ್ದು ಮಾಡಿ ಜಿಲ್ಲಾಡಳಿತ ದಿಟ್ಟ ನಿರ್ಧಾರ ತೆಗೆದುಕೊಂಡಿದೆ.

ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಬೋರ್ ಬ್ಲಾಸ್ಟ್‌ನಿಂದ ಕೆಆರ್​ಎಸ್‌ ಅಣೆಕಟ್ಟೆಗೆ ತೊಂದರೆ ಇದೆ ಎಂಬ ವರದಿಯನ್ನು ಅಧಿಕಾರಿಗಳು ನೀಡಿದ್ದರು. ಹೀಗಾಗಿ ರಾಜ್ಯ ಸರ್ಕಾರ ಗಣಿಗಾರಿಕೆಯನ್ನು ನಿಷೇಧ ಮಾಡಿತ್ತು.

ABOUT THE AUTHOR

...view details