ಮಂಡ್ಯ :ಹಿಂದೂಪರ ಸಂಘಟನೆಗಳು ಪಟ್ಟಣದ ಮೂಡಲ ಬಾಗಿಲು ಆಂಜನೇಯಸ್ವಾಮಿ ಮೂಲ ಸ್ಥಳ ಜಾಮೀಯಾ ಮಸೀದಿ. ಇಲ್ಲಿ ನಮಗೆ ಪೂಜೆ ಮಾಡಲು ಅವಕಾಶ ಕೊಡಿ ಎಂದು ಆಗ್ರಹಿಸಿ ಜಾಮೀಯಾ ಮಸೀದಿ ಚಲೋ ನಡೆಸಿದ್ದರು. ಈ ವೇಳೆ ಮಸೀದಿಯ ಮೇಲೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಜಿಲ್ಲಾಡಳಿತ ಹೇರಿದ್ದ ನಿಷೇಧಾಜ್ಞೆ ಮುಗಿದಿದ್ದರೂ ಸಹ ಪಟ್ಟಣದಲ್ಲಿ ಜಾಮೀಯಾ ಮಸೀದಿ ಸೇರಿದಂತೆ ವಿವಿಧೆಡೆ ಪೊಲೀಸರ ಭದ್ರತೆ ಮುಂದುವರಿದಿದೆ.
ಜಾಮೀಯಾ ಮಸೀದಿ ಸುತ್ತಲೂ ಬ್ಯಾರಿಕೇಡ್ ಬಳಸಿ ಪೊಲೀಸ್ ಬಂದೋಬಸ್ತ್ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ. ಹಿಂದು ಸಂಘಟನೆಗಳಿಂದ ಶನಿವಾರ ನಡೆದ ಪ್ರತಿಭಟನೆ ಹಿನ್ನೆಲೆ ಶುಕ್ರವಾರ ಸಂಜೆಯಿಂದ ಭಾನುವಾರ ಬೆಳಗ್ಗಿನವರೆಗೂ ಜಿಲ್ಲಾಡಳಿತ ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಿತ್ತು.