ಮಂಡ್ಯ:ಕಾವೇರಿ ಕಣಿವೆ ಪ್ರದೇಶದಲ್ಲಿ ಸತತ ಮಳೆ ಬಿದ್ದ ಪರಿಣಾಮ ಕೃಷ್ಣರಾಜ ಸಾಗರ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಿದ್ದು, ಪ್ರಸ್ತುತ 97.55 ಅಡಿ ನೀರು ಏರಿಕೆಯಾಗಿದೆ.
ಸದ್ಯ ಜಲಾಶಯದ ಒಳ ಹರಿವು 16,601 ಕ್ಯೂಸೆಕ್ ಇದ್ದು, ಹೊರ ಹರಿವು 2,324 ಕ್ಯೂಸೆಕ್ ಆಗಿದೆ. ಜಲಾಶಯದಲ್ಲಿ 20.952 ಟಿಎಂಸಿ ನೀರಿನ ಪ್ರಮಾಣ ಲಭ್ಯವಿದೆ. ಕೊಡಗು-ಕೇರಳ ಭಾಗಗಳ ಪ್ರದೇಶದಲ್ಲಿ ಉತ್ತಮ ಮಳೆ ಬಿದ್ದರೆ ಕೆಆರ್ಎಸ್ ಜಲಾಶಯದ ಮೇಲ್ಭಾಗದ ಹೇಮಾವತಿ ಹಾಗೂ ಲಕ್ಷ್ಮಣ ತೀರ್ಥ ನದಿಗಳ ಮೂಲಕ ಒಳ ಹರಿವಿನ ಪ್ರಮಾಣ ಹೆಚ್ಚಾಗಿ ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುತ್ತದೆ. ಈ ಮೂಲಕ ಒಳ ಹರಿವಿನ ಪ್ರಮಾಣವೂ ಹೆಚ್ಚಾಗಿ, ಈ ಬಾರಿ ಜಲಾಶಯ ತುಂಬುವುದರಲ್ಲಿ ಸಂಶಯವಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.