ಕರ್ನಾಟಕ

karnataka

By

Published : Sep 13, 2019, 11:17 AM IST

ETV Bharat / state

ಮನ್ ಮುಲ್​ನಲ್ಲಿ ಭುಗಿಲೆದ್ದ ಅಸಮಾಧಾನ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದ ಮಂಡ್ಯ ಜಿಲ್ಲಾಧ್ಯಕ್ಷ

ಎಸ್.ಎಂ. ಕೃಷ್ಣ ಬೆಂಬಲಿಗ ಪ್ರಸನ್ನ ಕುಮಾರ್ ಹೆಸರನ್ನು ಸಿಎಂ ಯಡಿಯೂರಪ್ಪ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶದಿಂದ ಈಗ ಮನ್​ಮುಲ್​ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಮನ್ ಮುಲ್​ನಲ್ಲಿ ಬುಗಿಲೆದ್ದ ಅಸಮಧಾನ

ಮಂಡ್ಯ: ಸಿಎಂ ಯಡಿಯೂರಪ್ಪರ ನಿರ್ಧಾರಕ್ಕೆ ಜಿಲ್ಲಾ ಬಿಜೆಪಿಯಲ್ಲಿ ಅಸಮಧಾನದ ಹೊಗೆ ಎದ್ದಿದೆ. ಮನ್​ಮುಲ್​ನ ನಾಮನಿರ್ದೇಶಕ ಸ್ಥಾನಕ್ಕೆ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರು ರಾಜ್ಯಾಧ್ಯಕ್ಷರಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ಮನ್ ಮುಲ್ ಆಡಳಿತ ಮಂಡಳಿಗೆ ಇತ್ತೀಚೆಗೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಎಸ್.ಎಂ. ಕೃಷ್ಣ ಅವರ ಬೆಂಬಲಿಗ ಪ್ರಸನ್ನ ಕುಮಾರ್ ಹೆಸರನ್ನು ಸಿಎಂ ಯಡಿಯೂರಪ್ಪ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶಕ್ಕೆ ಈಗ ಅಸಮಾಧಾನ ಭುಗಿಲೆದ್ದಿದೆ.

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ

ಸಿಎಂ ಆದೇಶದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್​​ಗೆ ಪತ್ರ ಬರೆದಿರುವ ಜಿಲ್ಲಾಧ್ಯಕ್ಷ ನಾಗಣ್ಣಗೌಡ, ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕುವಂತೆ ಮನವಿ ಮಾಡಿದ್ದಾರೆ. ಆ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಿ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details