ಕರ್ನಾಟಕ

karnataka

By

Published : Jun 10, 2020, 12:26 AM IST

ETV Bharat / state

ಟ್ರಾನ್ಸ್​ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್​ಮ್ಯಾನ್​​ ಸಾವು

ಟ್ರಾನ್ಸ್​ಫಾರ್ಮರ್ ದುರಸ್ತಿ ಮಾಡುತ್ತಿರುವಾಗ ವಿದ್ಯುತ್ ಪ್ರವಹಿಸಿ ಲೈನ್​ಮ್ಯಾನ್​ ಸಾವನ್ನಪ್ಪಿದ ಘಟನೆ ಮಂಡ್ಯ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಲೈನ್​ ಮನ್ ಸಾವು
ಲೈನ್​ ಮನ್ ಸಾವು

ಮಂಡ್ಯ: ಟ್ರಾನ್ಸ್​ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್​ಮ್ಯಾನ್​ ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಲೊಕೇಶ್ (40) ಮೃತಪಟ್ಟಿರುವ ಲೈನ್​ಮ್ಯಾನ್. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಿರಿಯ ಅಧಿಕಾರಿಗಳ ಲೋಪದಿಂದ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ.

ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details