ಕರ್ನಾಟಕ

karnataka

ETV Bharat / state

ಈಜಲು ಹೋಗಿ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಪ್ರವಾಸಕ್ಕೆ ಬಂದಿದ್ದ ಆಂಧ್ರ ಮೂಲದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ.

By

Published : Jan 20, 2020, 9:06 PM IST

Mandya news
ಈಜಲು ಹೋಗಿ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಮಂಡ್ಯ:ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಆಂಧ್ರ ಮೂಲದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

ಮಧ್ಯಾಹ್ನ ಬೆಂಗಳೂರಿನ ಸ್ನೇಹಿತರ ಜೊತೆ ಮನೋಜ್ ಕುಮಾರ್ ಪ್ರವಾಸಕ್ಕೆ ಬಂದಿದ್ದರು. ಈ ಸಂದರ್ಭ ಕಾವೇರಿ ನದಿಯಲ್ಲಿ ಈಜಲು ಹೋಗಿ ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಶವಕ್ಕಾಗಿ ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ಆರಂಭ ಮಾಡಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

For All Latest Updates

TAGGED:

mandya news

ABOUT THE AUTHOR

...view details