ಮಂಡ್ಯ: ಕೆ.ಆರ್.ಪೇಟೆಯ ಸಂತೆಬಾಚಹಳ್ಳಿ ಹೋಬಳಿಯ ಸಿಂಗಾಪುರ ಗ್ರಾಮದಲ್ಲಿ ತೆರೆದ ಬಾವಿಗೆ ಆಯತಪ್ಪಿ ಬಿದ್ದು ರೈತ ದಂಪತಿ ಸಾವನ್ನಪ್ಪಿದ್ದಾರೆ.
ಸಿಂಗಾಪುರ ಗ್ರಾಮದ ರೈತ ಶಂಕರ್ ಮೂರ್ತಿ (38), ಅವರ ಪತ್ನಿ ವಸಂತ ಕುಮಾರಿ (31) ಮೃತ ದಂಪತಿ. ಗುರುವಾರ ರಾತ್ರಿ ತಮ್ಮ ಜಮೀನಿನಲ್ಲಿ ಕೊಳವೆ ಬಾವಿಯಿಂದ ತೆಂಗಿನ ಗಿಡಗಳಿಗೆ ಮತ್ತು ಜೋಳಕ್ಕೆ ನೀರು ಹಾಯಿಸಲು ತೆರಳುವಾಗ ಜಮೀನಿನ ಬಳಿ ಕಾಲು ಜಾರಿ ವಸಂತಕುಮಾರಿ ತೆರದ ಬಾವಿಗೆ ಬಿದ್ದಿದ್ದಾರೆ. ಬಳಿಕ ಪತಿ ಶಂಕರಮೂರ್ತಿಯು ಪತ್ನಿಯನ್ನು ಕಾಪಾಡಲು ಬಾವಿಗೆ ಇಳಿದಿದ್ದಾರೆ. ಆದ್ರೆ ಇಬ್ಬರಿಗೂ ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.