ಮಂಡ್ಯ: ಜಿಲ್ಲಾಧಿಕಾರಿ ಡಾ. ವೆಂಕಟೇಶ್ ದೀಪಾವಳಿ ಹಬ್ಬವನ್ನು ವೃದ್ಧಾಶ್ರಮದ ಹಿರಿಯರೊಂದಿಗೆ, ಬಾಲ ಮಂದಿರದ ಮಕ್ಕಳೊಂದಿಗೆ ಆಚರಿಸಿ ಸಂಭ್ರಮಿಸಿದ್ದಾರೆ.
ವೃದ್ಧಾಶ್ರಮದ ಹಿರಿಯರು, ಬಾಲವನದ ಮಕ್ಕಳೊಂದಿಗೆ ದೀಪಾವಳಿ ಆಚರಿಸಿದ ಮಂಡ್ಯ ಡಿ.ಸಿ - ಮಕ್ಕಳು, ಹಿರಿಯರೊಂದಿಗೆ ದೀಪಾವಳಿ ಆಚರಿಸಿದ ಜಿಲ್ಲಾಧಿಕಾರಿ
ಮಂಡ್ಯದ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ದೀಪಾವಳಿ ಹಬ್ಬವನ್ನು ವೃದ್ಧಾಶ್ರಮದ ಹಿರಿಯರೊಂದಿಗೆ, ಬಾಲ ಮಂದಿರದ ಮಕ್ಕಳೊಂದಿಗೆ ಆಚರಿಸಿ ಸಂಭ್ರಮಿಸಿದ್ದಾರೆ.
![ವೃದ್ಧಾಶ್ರಮದ ಹಿರಿಯರು, ಬಾಲವನದ ಮಕ್ಕಳೊಂದಿಗೆ ದೀಪಾವಳಿ ಆಚರಿಸಿದ ಮಂಡ್ಯ ಡಿ.ಸಿ](https://etvbharatimages.akamaized.net/etvbharat/prod-images/768-512-4895516-thumbnail-3x2-net.jpg)
ಮಕ್ಕಳು, ಹಿರಿಯರೊಂದಿಗೆ ದೀಪಾವಳಿ ಆಚರಿಸಿದ ಮಂಡ್ಯದ ಜಿಲ್ಲಾಧಿಕಾರಿ ಡಾ. ವೆಂಕಟೇಶ್
ತಮ್ಮ ಮನೆಯಲ್ಲಿ ಹಿರಿಯರಿಗೆ ಗೌರವ ಸಲ್ಲಿಸಿ, ಮಕ್ಕಳಿಗೆ, ಸಣ್ಣದಾದ ಉಡುಗೊರೆ ನೀಡಿ ನೀತಿ ಪಾಠ ಮಾಡಿದರು. ನಗರದ ಜಿಲ್ಲಾಧಿಕಾರಿ ಗೃಹದಲ್ಲಿ ಮಕ್ಕಳೊಂದಿಗೆ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಿದರು.
ಸಂಭ್ರಮದ ನಂತರ ಮಕ್ಕಳಿಗೆ ಹಾಗೂ ಹಿರಿಯರಿಗೆ ಸಿಹಿ ಹಂಚಿ, ಅಧಿಕಾರಿಗಳೊಂದಿಗೆ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಇವರ ಈ ಮಾದರಿ ಹಬ್ಬಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.