ಕರ್ನಾಟಕ

karnataka

ETV Bharat / state

ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೆಆರ್​ಎಸ್​ನಲ್ಲಿ ಪೊಲೀಸ್​ ಭದ್ರತೆ ಹೆಚ್ಚಳ - ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನನಿಬಿಡ ಪ್ರದೇಶ ಸೇರಿದಂತೆ ಅತಿಸೂಕ್ಷ್ಮ ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದಾರೆ.

ಕೆಆರ್​ಎಸ್​ಗೆ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ
police take action in KRS dam

By

Published : Jan 20, 2020, 10:58 PM IST

Updated : Jan 21, 2020, 12:06 AM IST

ಮಂಡ್ಯ:ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನನಿಬಿಡ ಪ್ರದೇಶ ಸೇರಿದಂತೆ ಅತಿಸೂಕ್ಷ್ಮ ಸ್ಥಳಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

ಮಂಗಳೂರಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಕೆಆರ್​ಎಸ್​ನಲ್ಲಿ ಪೊಲೀಸ್​ ಭದ್ರತೆ ಹೆಚ್ಚಳ

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಕೆಆರ್​ಎಸ್​ನಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ತಪಾಸಣೆ ಮಾಡಿ ಮುನ್ನೆಚ್ಚರಿಕೆ ವಹಿಸಿದ್ದು, ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಭದ್ರತೆಯಲ್ಲಿ ಕೆಆರ್​ಎಸ್​ಗೆ ಭದ್ರತೆ ಒದಗಿಸಲಾಗಿದೆ. ಸಿಬ್ಬಂದಿ ಪ್ರವಾಸಿಗರ ಮೇಲೆ ನಿಗಾ ಇಟ್ಟಿದ್ದಾರೆ.

ಕೆಆರ್​ಎಸ್​ನ ಪ್ರವಾಸಿಗರ ದ್ವಾರ, ಉತ್ತರ ಮತ್ತು ದಕ್ಷಿಣ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದ್ದು, ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣೆ ಮಾಡಲಾಗಿದೆ. ಅನುಮಾನ ಬಂದ ಪ್ರವಾಸಿಗರನ್ನು ಪ್ರಶ್ನಿಸಿ ಒಳಗೆ ಬಿಡಲಾಗುತ್ತಿದೆ. ನಗರದ ರೈಲ್ವೆ ನಿಲ್ದಾಣದಲ್ಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Last Updated : Jan 21, 2020, 12:06 AM IST

ABOUT THE AUTHOR

...view details