ಮಂಡ್ಯ: ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ಆರೋಪಿಸುತ್ತಿರುವ ಕುಮಾರಸ್ವಾಮಿ ಒಂದು ವರ್ಷ ಸುಮ್ಮನಿದ್ದಿದ್ದು ಏಕೆ? ಡ್ರಗ್ಸ್ ವಿಚಾರ ಸುದ್ದಿಯಲ್ಲಿರುವ ಈ ಸಂದರ್ಭದಲ್ಲಿ ಅವರು ಆರೋಪಿಸುತ್ತಿರುವುದೇಕೆ? ಮೈತ್ರಿ ಸರ್ಕಾರದ ನಶೆಯಿಂದ ಹೊರಬರಲು ಕುಮಾರಸ್ವಾಮಿಗೆ ಒಂದು ವರ್ಷ ಬೇಕಾಯಿತೇ? ಮೈತ್ರಿ ಸರ್ಕಾರ ಅಸ್ಥಿರಗೊಂಡಾಗ ಏಕೆ ಕುಮಾರಸ್ವಾಮಿ ಹೇಳಲಿಲ್ಲ ಎಂದು ಪ್ರಶ್ನಿಸಿದರು. ಅವರು ಆಗಾಗ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಿರುತ್ತಾರೆ. ಮುಖ್ಯಮಂತ್ರಿಯಾಗಿದ್ದವರು ಅವರು, ಜವಾಬ್ದಾರಿಯಿಂದ ಮಾತನಾಡಬೇಕಾಗುತ್ತದೆ ಎಂದಿದ್ದಾರೆ.
ಸ್ಯಾಂಡಲ್ವುಡ್ ನಲ್ಲಿದವರೆಲ್ಲರೂ ಗಾಂಜಾ ಅಥವಾ ನಶೆಗೆ ಒಳಾಗಾದ್ರು ಅಂತಲ್ಲಾ. ಒಂದು ಕೊಡ ಹಾಲಿನಲ್ಲಿ ಒಂದು ಹರಳು 'ಉಪ್ಪು' ಬಿದ್ರೆ ಹಾಲೆಲ್ಲಾ ಕೆಟ್ಟೋಗುತ್ತದೆ. ಸಾಮಾನ್ಯ ಜನರು ತಪ್ಪು ಮಾಡುವುದಕ್ಕೂ ಸೆಲೆಬ್ರಿಟಿ ತಪ್ಪು ಮಾಡುವುದಕ್ಕೂ ವ್ಯತ್ಯಾಸ ಇದೆ ಎಂದು ಸಚಿವರು ಹೇಳಿದ್ರು.