ಕರ್ನಾಟಕ

karnataka

ETV Bharat / state

ಕರ್ತವ್ಯ ಲೋಪ, ಸತತ ಗೈರು ಹಾಜರಿ... ವೈದ್ಯಾಧಿಕಾರಿಯನ್ನು ಕೆಲಸದಿಂದ ಕಿತ್ತು ಹಾಕಿ ಎಂದ ಶಾಸಕ - ಶಾಸಕ ಪುಟ್ಟರಾಜು,

ಕರ್ತವ್ಯ ಲೋಪ ಮತ್ತು ಸತತ ಗೈರು ಹಾಜರಿ ಹಾಕುತ್ತಿದ್ದ ವೈದ್ಯನನ್ನು ಕೆಲಸದಿಂದ ಕಿತ್ತು ಹಾಕಿ ಎಂದು ಶಾಸಕ ಗರಂ ಆದ ಘಟನೆ ಮಂಡ್ಯದಲ್ಲಿ ನಡೆಯಿತು.

MLA Puttaraju angry,  MLA Puttaraju angry on Primary Health Center medical officer,  MLA Puttaraju,  MLA Puttaraju news, ಶಾಸಕ ಪುಟ್ಟರಾಜು ಕಿಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮೇಲೆ ಶಾಸಕ ಪುಟ್ಟರಾಜು ಕಿಡಿ, ಶಾಸಕ ಪುಟ್ಟರಾಜು, ಶಾಸಕ ಪುಟ್ಟರಾಜು ಸುದ್ದಿ,
ಆ ವೈದ್ಯಾಧಿಕಾರಿಯನ್ನು ಕೆಲಸದಿಂದ ಕಿತ್ತು ಹಾಕಿ ಎಂದ ಶಾಸಕ

By

Published : May 13, 2021, 8:18 AM IST

ಮಂಡ್ಯ:ಕರ್ತವ್ಯಲೋಪ ಹಾಗೂ ಸತತ ಗೈರು ಹಾಜರಿಯಿಂದ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದ ಹೊಳಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರವಿಕುಮಾರ್‌ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕರ್ತವ್ಯದಿಂದ ಅಮಾನತುಗೊಳಿಸುವಂತೆ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಕೊರೊನಾ ಎರಡನೇ ಅಲೆಯ ಹಾವಳಿಯಿಂದ ಜನಸಾಮಾನ್ಯರು ತೊಂದರೆಯಲ್ಲಿರುವಾಗ ವಾರಕ್ಕೊಮ್ಮೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹಾಜರಾತಿ ಪುಸ್ತಕದಲ್ಲಿ ಮುಂಚಿತವಾಗಿ ಸಹಿ ಹಾಕಿ ತೆರಳುತ್ತಿದ್ದ ವೈದ್ಯಾಧಿಕಾರಿ ವರ್ತನೆ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಪುಟ್ಟರಾಜು ಭೇಟಿ ನೀಡಿ ಪರಿಶೀಲಿಸಿದರು.

ವೈದ್ಯಾಧಿಕಾರಿಯನ್ನು ಕೆಲಸದಿಂದ ಕಿತ್ತು ಹಾಕಿ- ಶಾಸಕ ಸಿ.ಎಸ್‌.ಪುಟ್ಟರಾಜು

ಈ ವೇಳೆ ಡಿಎಚ್‌ಒ ಡಾ.ಮಂಚೇಗೌಡ, ಟಿಎಚ್‌ಒ ಡಾ.ಜವರೇಗೌಡ ಹಾಗೂ ತಹಸೀಲ್ದಾರ್‌ ಚಂದ್ರಶೇಖರ್ ಶಂಗಾಳಿ ಉಪಸ್ಥಿತಿಯಲ್ಲಿ ಗ್ರಾಮಸ್ಥರ ಆಹವಾಲು ಆಲಿಸಿದ ಶಾಸಕರು ಟಿಎಚ್‌ಒ ಅವರನ್ನು ತರಾಟೆಗೆ ತೆಗೆದುಕೊಂಡರು.

ಕೊರೊನಾ ಸೋಂಕು ನಿವಾರಣೆಗೆ ಹಗಲಿರುಳು ವೈದ್ಯ ಸಮೂಹ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವೇಳೆ ಸ್ಥಳೀಯ ವೈದ್ಯರು ಉಡಾಫೆ ವರ್ತನೆ ತೋರಿಸುತ್ತಿದ್ದಾರೆ. ಸತತ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಮುತುವರ್ಜಿ ವಹಿಸಬೇಕಾದ ಟಿಎಚ್‌ಒ ನಿರ್ಲಕ್ಷ್ಯ ತೋರಿದರೆ ಸಹಿಸುವುದಿಲ್ಲ. ಕೂಡಲೇ ಸಂಬಂಧಪಟ್ಟ ವೈದ್ಯರ ಮೇಲೆ ಕಾನೂನು ಕ್ರಮಕ್ಕೆ ಶಿಫಾರಸು ಮಾಡಬೇಕು ಎಂದು ನಿರ್ದೇಶಿಸಿದರು.

ABOUT THE AUTHOR

...view details