ಮಂಡ್ಯ:ರೈತರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಕೊರೊನಾ ಸೋಂಕು ಹರಡದಿರಲಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಸ್ಯಾನಿಟೈಸರ್ ಟನಲ್ ನಿರ್ಮಾಣ ಮಾಡಿಕೊಟ್ಟಿದ್ದಾರೆ.
ನಿಖಿಲ್ ಗಿಫ್ಟ್ ಆಗಿ ಕೊಟ್ಟ ಸ್ಯಾನಿಟೈಸಿಂಗ್ ಟನಲ್ ಬಗ್ಗೆ ವೈದ್ಯರ ಕಳವಳ... ಕಾರಣ?
ರೈತರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಕೊರೊನಾ ಸೋಂಕು ತಗುಲಬಾರದೆಂಬ ಕಾರಣಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಯಾನಿಟೈಸಿಂಗ್ ಟನಲ್ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಆದರೆ, ಇದೊರಳಗೆ ಬಳಸಲಾಗುತ್ತಿರುವ ಹೈಪೋ ಕ್ಲೋರೈಡ್ ಬಗ್ಗೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.
ರೈತರು ಹಾಗೂ ಜನರ ಅನುಕೂಲಕ್ಕಾಗಿ ಮಾರುಕಟ್ಟೆಯನ್ನು ನಗರದ ಸರ್ಎಂವಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾದೆ, ಆದರೂ ಜನ ವಸ್ತುಗಳನ್ನು ಖರೀದಿ ಮಾಡಲು ಮುಗಿ ಬೀಳುತ್ತಿದ್ದಾರೆ. ಇದನ್ನು ಗಮನಿಸಿದ ಜೆಡಿಎಸ್ ನಾಯಕರು ಸೋಡಿಯಂ ಹೈಪೋಕ್ಲೋರೈಡ್ ಟನಲ್ ನಿರ್ಮಾಣ ಮಾಡಿದ್ದರು, ಆದರೆ ಈ ಟನಲ್ನಲ್ಲಿ ಕೂಡ ಬ್ಯಾಕ್ಟೀರಿಯಾ ನಿರೋಧಕ ಶಕ್ತಿ ಇಲ್ಲ ಎಂಬ ಆರೋಪ ಕೇಳಿ ಬಂದಿತ್ತು.
ಇದನ್ನು ಮನಗಂಡ ನಿಖಿಲ್ ಕುಮಾರಸ್ವಾಮಿ ಸ್ಯಾನಿಟೈಸರ್ ಟನಲ್ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಈ ಟನಲ್ ನಿರ್ಮಾಣದಿಂದಾಗಿ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ, ಆದರೆ ವೈದ್ಯರು ಮಾತ್ರ ಟನಲ್ನಲ್ಲಿ ಸಿಂಪಡಣೆ ಮಾಡುತ್ತಿರುವ ಔಷಧದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಸ್ಯಾನಿಟೈಸರ್ ಬಿಟ್ಟು ಸೋಡಿಯಂ ಹೈಪೋಕ್ಲೋರೈಡ್ ಸಿಂಪಡಣೆ ಮಾಡಿದರೆ ಅದರಿಂದ ಚರ್ಮ ರೋಗಗಳು ಬರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.