ಕರ್ನಾಟಕ

karnataka

ಶ್ರೀರಂಗಪಟ್ಟಣ ಮಸೀದಿ ವಿವಾದ: ಅಲ್ಲಿ ದೇವಾಲಯ ಇತ್ತು ಅನ್ನೋದಕ್ಕೆ ಈ ಪುಸ್ತಕವೇ ಸಾಕ್ಷಿ?

By

Published : Jun 6, 2022, 4:24 PM IST

Updated : Jun 6, 2022, 4:56 PM IST

ಜಾಮಿಯಾ ಮಸೀದಿಗೂ ಮೊದಲೇ ಅಲ್ಲಿ ಮೂಡಲು ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಿತ್ತು. ಆ ದೇವಸ್ಥಾನ ನಾಶ ಮಾಡಿ ಟಿಪ್ಪು ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ ಎಂಬ ಬರಹ ಪುಸ್ತಕವೊಂದರ ಪುಟಗಳಲ್ಲಿ ಉಲ್ಲೇಖವಾಗಿದೆ. ಈ ಪುಸ್ತಕದಲ್ಲಿರುವ ವಿಚಾರ ಈಗ ಜಿಲ್ಲೆಯಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ.

ಮಂಡ್ಯದಲ್ಲಿ ಮಸೀದಿ ವಿವಾದ ಪ್ರಕರಣ
ಮಂಡ್ಯದಲ್ಲಿ ಮಸೀದಿ ವಿವಾದ ಪ್ರಕರಣ

ಮಂಡ್ಯ: ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿರುವ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಈಗ ಪುಸ್ತಕವೊಂದು ಆಕರ ಗ್ರಂಥವಾಗಿ ಎಲ್ಲೆಡೆ ಹರಿದಾಡುತ್ತಿದೆ. ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದದ ಹೋರಾಟದ ಕಾವು ಹೆಚ್ಚುತ್ತಿರುವುದರ ಜೊತೆಗೆ ದಿನಕ್ಕೊಂದು ಮಹತ್ವದ ತಿರುವನ್ನು ಪಡೆದುಕೊಳ್ಳುತ್ತಿದೆ.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಗೂ ಮೊದಲೇ ಅಲ್ಲಿ ಮೂಡಲು ಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಿತ್ತು. ಆ ದೇವಸ್ಥಾನ ನಾಶ ಮಾಡಿ ಟಿಪ್ಪು ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ ಎಂಬ ಬರಹ ಆ ಪುಸ್ತಕದ ಪುಟಗಳಲ್ಲಿ ಉಲ್ಲೇಖವಾಗಿದೆ. ಈ ಪುಸ್ತಕದಲ್ಲಿರುವ ವಿಚಾರ ಈಗ ಜಿಲ್ಲೆಯಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ.

ಮಂಡ್ಯದಲ್ಲಿ ಮಸೀದಿ ವಿವಾದ ಪ್ರಕರಣ

ಬಾಲಗಣಪತಿಭಟ್ಟ ಎಂಬವರು ಈ ಪುಸ್ತಕ ಬರೆದಿದ್ದಾರೆ. ಇದಕ್ಕೆ ಮೂಡಲು ಬಾಗಿಲು ಶ್ರೀ ಆಂಜನೇಯಸ್ವಾಮಿ ಸುಪ್ರಭಾತ ಎಂಬ ಹೆಸರು ನೀಡಲಾಗಿದೆ. ಈ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶಗಳ ಬಗ್ಗೆ ಸರ್ಕಾರ ತಕ್ಷಣ ಪರಿಶೀಲಿಸಬೇಕೆಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ರಾಜ್ಯದಲ್ಲಿ ಶೈಕ್ಷಣಿಕ ಕ್ಷೇತ್ರ ಕೇಸರೀಕರಣ ಮಾಡೋದು ಸರಿಯಲ್ಲ: ಮಾಜಿ ಡಿಸಿಎಂ ಪರಮೇಶ್ವರ್

Last Updated : Jun 6, 2022, 4:56 PM IST

ABOUT THE AUTHOR

...view details