ಕರ್ನಾಟಕ

karnataka

ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಆರೋಪ: ಠಾಣೆ ಮುಂಭಾಗ ಹಿಂದೂ ಕಾರ್ಯಕರ್ತರ ಪ್ರತಿಭಟನೆ

By

Published : Sep 18, 2021, 12:11 PM IST

ಹಿಂದೂ ಸಂಘಟನೆ‌ ಕಾರ್ಯಕರ್ತರಿಗೆ ಕೆ.ಆರ್. ಪೇಟೆ ಪಟ್ಟಣ ಠಾಣೆ ಪಿಎಸ್ಐ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರ್ಯಕರ್ತರು ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

Protest
ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಮಂಡ್ಯ: ಗಣಪತಿ ನಿಮಜ್ಜನ ವೇಳೆ ಹಿಂದೂ ಸಂಘಟನೆ‌ ಕಾರ್ಯಕರ್ತರಿಗೆ ಕೆ.ಆರ್.ಪೇಟೆ ಪಟ್ಟಣ ಠಾಣೆ ಪಿಎಸ್ಐ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ಎದುರು ಜಮಾಯಿಸಿದ ಪ್ರತಿಭಟನಾಕಾರರು ಸಿಂದಘಟ್ಟ ಗ್ರಾಮದಲ್ಲಿ ಗಣಪತಿ ನಿಮಜ್ಜನ ವೇಳೆ ಹಿಂದೂ ‌‌ಸಂಘಟನೆ ಕಾರ್ಯಕರ್ತರಿಗೆ ಪಟ್ಟಣ ಠಾಣೆಯ ಪಿಎಸ್ಐ ಬ್ಯಾಟರಾಯಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.‌ ಜೊತೆಗೆ ಕಾರ್ಯಕರ್ತ ಸತೀಶ್ ಎಂಬುವರನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿದ್ದಾರೆ.‌ ಆದ್ದರಿಂದ ಪಿಎಸ್ಐ ಬ್ಯಾಟರಾಯಗೌಡ ಅವರನ್ನು ಅಮಾನತು ಮಾಡಬೇಕು‌ ಎಂದು ಆಗ್ರಹಿಸಿದರು.

ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಪ್ರತಿಭಟನಾ ಸ್ಥಳಕ್ಕೆ ಎಸ್​ಪಿ ಭೇಟಿ:

ನಿನ್ನೆ ಬೆಳ್ಳಗೆಯಿಂದಲೇ ಠಾಣೆ ಮುಂದೆ ಪ್ರತಿಭಟನಾಕಾರರು ಜಮಾಯಿಸಿದ ಹಿನ್ನೆಲೆ ತಡರಾತ್ರಿ ಠಾಣೆಗೆ ಮಂಡ್ಯ ಎಸ್​ಪಿ ಡಾ.ಅಶ್ವಿನಿ ಆಗಮಿಸಿ ಕಾರ್ಯಕರ್ತರನ್ನು ಮನವೊಲಿಸಲು ಪ್ರಯತ್ನಿಸಿದರು. ಈ ಕುರಿತು ವಿಚಾರಣೆ ನಡೆಸಿ ಕಾನ್ಸ್​ಟೇಬಲ್​​ ರೆಹಮತ್ತುಲ್ಲಾಖಾನ್, ಪ್ರದೀಪ್ ರನ್ನ ಸಸ್ಪೆಂಡ್ ಮಾಡುವುದಾಗಿ ಹೇಳಿದರು. ಅಲ್ಲದೇ ಪಿಎಸ್ಐ ಬ್ಯಾಟರಾಯಗೌಡ ವಿರುದ್ಧ ಐಜಿ ಗೆ ದೂರು ನೀಡುವುದಾಗಿ ಭರವಸೆ ನೀಡಿದರು. ಎಸ್​ಪಿ ಭರವಸೆ ನೀಡಿದ ಹಿನ್ನೆಲೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಕೈಬಿಟ್ಟರು.

ABOUT THE AUTHOR

...view details