ಕರ್ನಾಟಕ

karnataka

ETV Bharat / state

ಕೆಆರ್​​ಎಸ್​​ನಿಂದ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ - protest by the farmers union in mandya

ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ನೀಡಿದೆ. ಆದರೆ ನಮಗೆ ನೀರಿಲ್ಲ. ಹೀಗಾಗಿ ಕೂಡಲೇ ಬೆಳೆ ರಕ್ಷಣೆಗಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿ ರೈತರು ಧರಣಿ ನಡೆಸಿದರು.

protest  from the Farmers' Union in Mandya
ರೈತ ಸಂಘದ ವತಿಯಿಂದ ಆಗ್ರಹ...

By

Published : Jun 22, 2020, 8:35 PM IST

ಮಂಡ್ಯ:ನಾಲೆಗಳಿಗೆ ಕೆಆರ್​ಎಸ್​ನಿಂದ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ಮುಖಂಡರು ತಾಲೂಕಿನ ಕೆಆರ್​​​ಎಸ್​ ಕಾವೇರಿ ನೀರಾವರಿ ಕಚೇರಿ ಎದುರು ಧರಣಿ ನಡೆಸಿದರು.

ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ ನೀರು ಬಿಡುವಂತೆ ಸೂಚನೆ ನೀಡಿದೆ. ಆದರೆ ನಮಗೆ ನೀರಿಲ್ಲ. ಕೂಡಲೇ ಬೆಳೆ ರಕ್ಷಣೆಗಾಗಿ ನೀರು ಹರಿಸಬೇಕು ಎಂದು ಒತ್ತಾಯ ಮಾಡಿ ಧರಣಿ ನಡೆಸಿದ ರೈತರು, ನಿಗಮದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸದ್ಯ ಭತ್ತದ ಬೆಳೆ ಕೊಯ್ಲಿಗೆ ಬಂದಿದ್ದರೂ ಕಬ್ಬಿನ ಬೆಳೆ ರಕ್ಷಣೆಗಾಗಿ ನೀರು ಬೇಕಾಗಿದೆ. ಮಳೆ ಸಣ್ಣ ಪ್ರಮಾಣದಲ್ಲಿ ಆಗಿದ್ದರೂ ನೀರು ಸಾಕಾಗುತ್ತಿಲ್ಲ. ಕೂಡಲೇ ನೀರು ಬಿಡಬೇಕು. ರೈತರ ರಕ್ಷಣೆ ಮಾಡಬೇಕು ಎಂದು ಒತ್ತಾಯ ಮಾಡಿದರು.

ABOUT THE AUTHOR

...view details