ಕರ್ನಾಟಕ

karnataka

By

Published : Apr 8, 2020, 2:37 PM IST

ETV Bharat / state

ಕೊರೊನಾ ಪೀಡಿತ ಮಳವಳ್ಳಿಗೆ ಅಶೋಕ್​ ಭೇಟಿ, ಪರಿಶೀಲನೆ..!

ಮಂಡ್ಯದ ಮಳವಳ್ಳಿ ಪಟ್ಟಣಕ್ಕೆ ಕಂದಾಯ ಸಚಿವ ಆರ್​. ಅಶೋಕ್​ ಭೇಟಿ ನೀಡಿ ಪರಿಶೀಲಬೆ ನಡೆಸಿದರು ಈ ಸಂದರ್ಭದಲ್ಲಿ ಸಚಿವರಿಗೆ ಜಿಲ್ಲಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳು ಸಾಥ್​ ನೀಡಿದರು.

R. ashok visited in mandya malavalli
ಕೊರೊನಾ ಪೀಡಿತ ಮಳವಳ್ಳಿಗೆ ಅಶೋಕ್​ ಭೇಟಿ

ಮಂಡ್ಯ : ಕೊರೊನಾ ಪೀಡಿತ ಮಳವಳ್ಳಿ ಪಟ್ಟಣಕ್ಕೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಳವಳ್ಳಿಯಲ್ಲಿ ಕೊರೊನಾ ಕಾಣಿಸಿಕೊಂಡಿರುವ ವಾರ್ಡ್ ನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದೆ. ಅಲ್ಲಿನ ನಿವಾಸಿಗಳು ಎಲ್ಲಿಯೂ ಸಂಚಾರ ಮಾಡದಂತೆ ಎಚ್ಚರಿಕೆ ವಹಿಸಲಾಗಿದೆ. ಪೊಲೀಸರಿಗೆ ಎಲ್ಲ ರೀತಿಯ ಅಧಿಕಾರ ನೀಡಲಾಗಿದೆ ಎಂದರು.

ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು. ನಂತರ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಹಶೀಲ್ದಾರ್, ಜಿಲ್ಲಾ ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಸಚಿವರಿಗೆ ಸಾಥ್​ ನೀಡಿದರು.

ABOUT THE AUTHOR

...view details