ಮಂಡ್ಯ :2ನೇ ಬಾರಿ ಮುಖ್ಯಮಂತ್ರಿ ಆಗುತ್ತೇನೆಂಬ ಅಸೂಯೆಯಿಂದ ನನ್ನನ್ನು ಸೋಲಿಸದರು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ದೇವಾಲಯ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮಾಡಿದ ಕೆಲಸಗಳನ್ನು ಜನ ಮರೆಯುವ ಹಾಗಿಲ್ಲ. ನಾನು ಅಧಿಕಾರದಲ್ಲಿದ್ದಾಗ 7 ಕೆಜಿ ಅಕ್ಕಿ ಕೊಟ್ಟೆ. ಆದ್ರೆ, ಈಗ ಯಡಿಯೂರಪ್ಪ ಅದನ್ನೂ ಕಡಿಮೆ ಮಾಡಿದ್ದಾರೆ ಎಂದರು.
ನಾನು ನಮ್ಮಪ್ಪನ ಮನೆಯಿಂದ ಕೊಟ್ಟಿಲ್ಲ. ಯಡಿಯೂರಪ್ಪನೂ ಅವರ ಅಪ್ಪನ ಮನೆಯಿಂದ ಕೊಡುತ್ತಿಲ್ಲ. ಬಿಎಸ್ವೈ ಅಧಿಕಾರಕ್ಕೆ ಬಂದ ಮೇಲೆ ನನ್ನ ಎಲ್ಲಾ ಕಾರ್ಯಕ್ರಮ ನಿಲ್ಲಿಸುತ್ತಿದ್ದಾರೆ. ಮಾತು ಎತ್ತಿದ್ರೆ ರೈತನ ಮಗ ಅಂತಾರೆ. ಪ್ರಮಾಣ ವಚನ ಸ್ವೀಕರಿಸುವಾಗ ಹಸಿರು ಶಾಲು ಹಾಕಿಕೊಳ್ಳೋದು, ರೈತರಿಗೆ ಅವಮಾನ ಮಾಡೋದು ಎಂದು ಕಿಡಿಕಾರಿದರು.