ಕರ್ನಾಟಕ

karnataka

By

Published : Jul 25, 2022, 3:37 PM IST

Updated : Jul 25, 2022, 4:38 PM IST

ETV Bharat / state

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌: ರೈತರು, ಭೂ ವಿಜ್ಞಾನಿಗಳ ತೀವ್ರ ವಿರೋಧ

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನಲ್ಲಿರುವ ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಜಿಲ್ಲಾಡಳಿತ ದಿನಾಂಕ ನಿಗದಿ ಮಾಡಿದೆ. ಜಾರ್ಖಂಡ್ ಮೂಲದ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿಗಳ ತಂಡ ಪರೀಕ್ಷಾರ್ಥ ಬ್ಲಾಸ್ಟಿಂಗ್ ನಡೆಸಲಿದ್ದು, ಟ್ರಯಲ್ ಬ್ಲಾಸ್ಟ್ ವರದಿ ಮೂರು ತಿಂಗಳೊಳಗಾಗಿ ಬರಲಿದೆ. ಆದರೆ, ಇದಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ  ರೈತರು, ಭೂ ವಿಜ್ಞಾನಿಗಳ ತೀವ್ರ ವಿರೋಧ
ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ರೈತರು, ಭೂ ವಿಜ್ಞಾನಿಗಳ ತೀವ್ರ ವಿರೋಧ

ಮಂಡ್ಯ: ಬೇಬಿಬೆಟ್ಟದ ಅಕ್ರಮ ಕಲ್ಲುಗಣಿಗಾರಿಕೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಜಲಾಶಯಕ್ಕೆ ಕಲ್ಲು ಗಣಿಗಾರಿಕೆ ಕಂಟಕವಾಗಿದೆಯಾ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಮಂಡ್ಯ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್ ಮೊರೆ ಹೋಗಿದೆ.

ಆದರೆ, ಟ್ರಯಲ್ ಬ್ಲಾಸ್ಟ್​ಗೆ ರೈತರು ಹಾಗೂ ಭೂ ವಿಜ್ಞಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ರೈತರು ಬೈಕ್ ಜಾಥಾ ನಡೆಸುವ ಮೂಲಕ ಟ್ರಯಲ್ ಬ್ಲಾಸ್ಟ್ ಗೆ ನಿಗದಿಪಡಿಸಿ ಜಾಗಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಪೊಲೀಸರು ತಡೆದಿದ್ದಾರೆ. ಇದರಿಂದ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಾರ್ಖಂಡ್ ಮೂಲದ ವಿಜ್ಞಾನಿಗಳ ತಂಡ:ಸರ್ಕಾರದ ಒಪ್ಪಿಗೆ ಪಡೆದು ಜುಲೈ 25 ರಿಂದ 31 ರವರೆಗೆ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆಗಳು ನಡೆದಿದ್ದು, ಇದಕ್ಕೆ ರೈತರು, ಭೂ ವಿಜ್ಞಾನಿಗಳು ಸೇರಿದಂತೆ ಹಲವರಿಂದ ವಿರೋಧ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನಲ್ಲಿರುವ ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಜಿಲ್ಲಾಡಳಿತ ದಿನಾಂಕ ನಿಗದಿ ಮಾಡಿದೆ.

ಜಾರ್ಖಂಡ್ ಮೂಲದ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿಗಳ ತಂಡ ಪರೀಕ್ಷಾರ್ಥ ಬ್ಲಾಸ್ಟಿಂಗ್ ನಡೆಸಲಿದ್ದು, ಟ್ರಯಲ್ ಬ್ಲಾಸ್ಟ್ ವರದಿ ಮೂರು ತಿಂಗಳೊಳಗಾಗಿ ಬರಲಿದೆ. ಕೆಆರ್‌ಎಸ್​​ಗೆ ಗಣಿಗಾರಿಕೆಯಿಂದ ಯಾವುದೇ ಅಪಾಯ ಇಲ್ಲ ಎಂಬ ವರದಿ ಬಂದರೆ ಮತ್ತೆ ಬೇಬಿಬೆಟ್ಟದಲ್ಲಿ ಕಲ್ಲುಗಣಿಗಾರಿಕೆ ಅವಕಾಶ ಸಿಗುವ ಸಾಧ್ಯತೆ ಇದೆ. ಹಾಗಾಗಿ ರೈತರು, ಬೇಬಿ ಗ್ರಾಮಸ್ಥರು ಹಾಗೂ ಕೆಲ ಭೂ ವಿಜ್ಞಾನಿಗಳು ಟ್ರಯಲ್ ಬ್ಲಾಸ್ಟ್‌ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌: ರೈತರು, ಭೂ ವಿಜ್ಞಾನಿಗಳ ತೀವ್ರ ವಿರೋಧ

ವಾಸ್ತವವೇ ಬೇರೆ ಪ್ರಾಯೋಗಿಕ ಪರೀಕ್ಷೆಯೇ ಬೇರೆ:ಕಳೆದ 3 ವರ್ಷಗಳಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸ್ಥಗಿತಗೊಂಡಿದೆ. ಗಣಿ ಮಾಲೀಕರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಟ್ರಯಲ್ ಬ್ಲಾಸ್ಟ್ ನಿರ್ಧಾರ ಮಾಡಿದ್ದಾರೆ. ವಿಜ್ಞಾನಿಗಳು ಪರೀಕ್ಷೆ ವೇಳೆ ಅಲ್ಪ ಪ್ರಮಾಣದ ಸ್ಫೋಟಕ ಬಳಸುತ್ತಾರೆ. ಆದರೆ, ಗಣಿಗಾರಿಕೆ ಮಾಡುವ ವೇಳೆ ಭಾರೀ ಸ್ಫೋಟಕ ಬಳಸಲಾಗುತ್ತದೆ. ಹಾಗಾಗಿ ಟ್ರಯಲ್ ಬ್ಲಾಸ್ಟ್‌ನಿಂದ ವಾಸ್ತವ ವರದಿ ಬರಲಾರದು ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸುವಂತೆ ಭೂ ವಿಜ್ಞಾನಿ ಪ್ರೊ.ಹೆಚ್.ಟಿ. ಬಸವರಾಜಪ್ಪ ವರದಿ ನೀಡಿದ್ದಾರೆ. ಸಂಸದೆ ಸುಮಲತಾ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಜ.10ರಂದು ವರದಿ ನೀಡಿರುವ ಬಸವರಾಜಪ್ಪ ಬೇಬಿ ಬೆಟ್ಟದಲ್ಲಿ ನಡೆಯುವ ಗಣಿಗಾರಿಕೆಯಿಂದ ಡ್ಯಾಂಗೆ ಅಪಾಯವಿದೆ. ಅಲ್ಲಿ ಸಂಪೂರ್ಣ ಗಣಿಗಾರಿಕೆ ನಿಷೇಧ ಮಾಡಬೇಕು.

ಟ್ರಯಲ್ ಬ್ಲಾಸ್ಟ್ ಮಾಡುತ್ತಿರುವುದಕ್ಕೆ ವಿರೋಧವಿದೆ. ಪರೀಕ್ಷಾರ್ಥ ಬ್ಲಾಸ್ಟ್ ಮಾಡುವುದರಿಂದಲೂ ಡ್ಯಾಂಗೆ ಅಪಾಯ ಆಗಬಹುದು. ಡ್ಯಾಂಗೆ ಅಪಾಯ ಆದರೆ ಯಾರು ಹೊಣೆ ಎಂದು ಹೆಚ್.ಟಿ.ಬಸವರಾಜಪ್ಪ ಪ್ರಶ್ನಿಸಿದ್ದಾರೆ. ಸರ್ಕಾರ ಕೂಡಲೇ ಟ್ರಯಲ್ ಬ್ಲಾಸ್ಟ್​ ರದ್ದು ಪಡಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ಸಾವಿನಲ್ಲೂ ಸ್ವಾಭಿಮಾನ; 20 ವರ್ಷದ ಮುಂಚಿತವಾಗಿ ಸಮಾಧಿ ನಿರ್ಮಾಣ - ಇಂದು ಅಂತ್ಯ ಸಂಸ್ಕಾರ!

Last Updated : Jul 25, 2022, 4:38 PM IST

ABOUT THE AUTHOR

...view details