ಕರ್ನಾಟಕ

karnataka

By

Published : Jul 26, 2019, 9:23 AM IST

ETV Bharat / state

ಕೇಂದ್ರೀಯ ವಿದ್ಯಾಲಯದ ಸಮಸ್ಯೆ ಕುರಿತು ಕೇಂದ್ರ ಸಚಿವರಿಗೆ ಸುಮಲತಾ ಮನವಿ

ಮಂಡ್ಯದ ಕೇಂದ್ರೀಯ ವಿದ್ಯಾಲಯದ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸುಮಲತಾ

ಮಂಡ್ಯ : ಸಂಸದೆ ಸುಮಲತಾ ಅಂಬರೀಶ್​ ಜಿಲ್ಲೆಯ ಅಭಿವೃದ್ಧಿಗಾಗಿ ಒಂದಲ್ಲಾ ಒಂದು ರೀತಿ ಕಾರ್ಯಪ್ರವೃತ್ತರಾಗಿದ್ದಾರೆ. ಇತ್ತೀಚೆಗಷ್ಟೆ ಮಂಡ್ಯ-ಮೈಸೂರು ರೈಲು ವಿಚಾರ, ರೈತರಿಗೆ ಕೆಆರ್​ಎಸ್​ದಿಂದ ನೀರು ಹರಿಸುವ ವಿಚಾರ ಮತ್ತು ವಿವಿಧ ಕಾಮಗಾರಿಗಳ ಕುರಿತು ಚರ್ಚೆ ನಡೆಸಿ ಗಮನ ಸೆಳೆದಿದ್ದರು.

ಇದೀಗ ಮಂಡ್ಯದ ಕೇಂದ್ರೀಯ ವಿದ್ಯಾಲಯ ಸಮಸ್ಯೆಗಳ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಚಿವ ರಮೇಶ್ ಪೋಖ್ರಿಯಾಲ್​ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್,​ ಶಾಲಾ ಕೊಠಡಿ, ವಸತಿ ಗೃಹ ಸೇರಿದಂತೆ ಎಲ್ಲ ಸಮಸ್ಯೆಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದೇನೆ. ಈ ಕುರಿತು ಸಚಿವರು ಸಹ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುಮಲತಾ ಟ್ವೀಟ್​ ಮಾಡಿದ್ದಾರೆ.

For All Latest Updates

TAGGED:

ABOUT THE AUTHOR

...view details