ಕರ್ನಾಟಕ

karnataka

ETV Bharat / state

ಖರೀದಿ ಪ್ರಕ್ರಿಯೆ ಸಂಬಂಧ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ: ಮಂಡ್ಯ ಡಿಸಿ ಸೂಚನೆ - DC S Aswathi notice

ಭತ್ತ, ರಾಗಿ ಖರೀದಿ ಸಂಬಂಧ ಸೀನಿಯಾರಿಟಿ ಆಧಾರದ ಮೇಲೆ ಖರೀದಿಸಿ. ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬೇಡಿ. ಈ ಸಂಬಂಧ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚನೆ ನೀಡಿದರು.

DC S Aswathi notice
ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ

By

Published : Feb 25, 2021, 11:45 AM IST

ಮಂಡ್ಯ: ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿರುವ ಭತ್ತ, ರಾಗಿ ದಾಸ್ತಾನುಗಳ ತಪಾಸಣೆ ಮಾಡಿ ಹಾಗೂ ಖರೀದಿ ಪ್ರಕ್ರಿಯೆ ಸಂಬಂಧ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 2020-21ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಖರೀದಿ ಸಂಬಂಧ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಂಡಿರುವ ಖರೀದಿ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ಸಾಗಬೇಕು. ಈಗಾಗಲೇ ಭತ್ತ, ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಸರ್ಕಾರದಿಂದ ರೈತರಿಗೆ ನಿಗದಿ ಪಡಿಸಿದ ಖರೀದಿ ಮಿತಿಯನ್ನು ಸಡಿಲಗೊಳಿಸಿದ್ದು, ಪ್ರತಿ ಎಕರೆಗೆ ಭತ್ತಕ್ಕೆ 25 ಕ್ವಿಂಟಲ್ ಮತ್ತು ರಾಗಿಗೆ 10 ಕ್ವಿಂಟಲ್​ನಂತೆ ಗರಿಷ್ಠ ಮಿತಿ ಇಲ್ಲದಂತೆ ಖರೀದಿಸಲಾಗುವುದು. ಈಗಾಗಲೇ ನೋಂದಾಯಿಸಿಕೊಂಡಿರುವ ರೈತರು ಮತ್ತೊಮ್ಮೆ ನೋಂದಾಯಿಸಿಕೊಂಡು ರಾಗಿ ಮತ್ತು ಭತ್ತ ಸರಬರಾಜು ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಲು ಅವರು ಕೋರಿದರು.

ಭತ್ತ, ರಾಗಿ ಖರೀದಿ ಸಂಬಂಧ ಸೀನಿಯಾರಿಟಿ ಆಧಾರದ ಮೇಲೆ ಖರೀದಿಸಿ, ದಲ್ಲಾಳಿಗಳಿಗೆ ಅವಕಾಶ ಮಾಡಿಕೊಡಬೇಡಿ. ಈ ಸಂಬಂಧ ಅಧಿಕಾರಿಗಳು ಕ್ರಮ ಕೈಗೊಳ್ಳಿ. ಈಗಾಗಲೇ ಭತ್ತ ಖರೀದಿ ಸಂಬಂಧ ಒಟ್ಟು 31 ನೋಂದಾವಣಿ ಕೇಂದ್ರಗಳನ್ನು ತೆರೆದಿದ್ದು, ಈ ಕೇಂದ್ರಗಳಲ್ಲಿ ಕಂಡು ಬಂದಿರುವ ಸಿಬ್ಬಂದಿ ಕೊರತೆಗಳನ್ನು ನಿವಾರಿಸಿ. ಅಲ್ಲದೇ ಭತ್ತ, ರಾಗಿ ಸಂಬಂಧ ಉತ್ತಮ ಗುಣಮಟ್ಟವನ್ನು ಪರಿಶೀಲನೆ ಮಾಡಿ ಖರೀದಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಭತ್ತ, ರಾಗಿ ಖರೀದಿ ಮಾಡಿರುವ ರೈತರಿಗೆ ಹಣ ಸಂದಾಯ ಮಾಡಲು ಕ್ರಮ ಕೈಗೊಳ್ಳಿ ಎಂದು ಮಾರ್ಕೆಂಟಿಗ್ ಫೆಡರೇಶನ್ ಅಧಿಕಾರಿಗಳಿಗೆ ಸೂಚಿಸಿದರು. ಮಾರ್ಕೆಂಟಿಗ್ ಫೆಡರೇಶನ್ ಅಧಿಕಾರಿಗಳು ಕ್ಷೇತ್ರ ಕಾರ್ಯದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಮತ್ತು ಆಹಾರ ನಿರೀಕ್ಷಕರು ಆಹಾರ ಪದಾರ್ಥಗಳನ್ನು ವಿತರಣೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ABOUT THE AUTHOR

...view details