ಮಂಡ್ಯ: ಶಿವಮೊಗ್ಗ ಸ್ಫೋಟದ ಬಳಿಕ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದೆ ಎಂದು ಪಾಂಡುಪುರ ಉಪವಿಭಾಗಧಿಕಾರಿ ಶಿವಾನಂದಮೂರ್ತಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಕೈಕುಳಿ ಸೇರಿದಂತೆ ಎಲ್ಲ ರೀತಿಯ ಕಲ್ಲು ಗಣಿಗಾರಿಕೆ ನಿಷೇಧಿಸಲಾಗಿದೆ. ಕೆಆರ್ಎಸ್ ಡ್ಯಾಂ ಸುರಕ್ಷತೆ ದೃಷ್ಟಿಯಿಂದ ಗಣಿಗಾರಿಗೆ ಸ್ಥಗಿತ ಮಾಡಲಾಗಿದೆ. ಈ ಹಿಂದೆ ಕ್ವಾರಿಗಳಿಂದ ಕಲ್ಲು ತೆಗೆಯುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಹೊರಗಿನಿಂದ ಕಲ್ಲು ತಂದು ಕ್ರಷರ್ (ಕಲ್ಲುಪುಡಿ) ಘಟಕ ನಡೆಸಲು ಅವಕಾಶ ನೀಡಲಾಗಿತ್ತು ಎಂದರು.