ಕರ್ನಾಟಕ

karnataka

ETV Bharat / state

ಮಂಡ್ಯ: ಕಾರು-ಆಟೋ ಮಧ್ಯೆ ಭೀಕರ ರಸ್ತೆ ಅಪಘಾತ, ಮೂವರು ಸಾವು - ಮಂಡ್ಯದಲ್ಲಿ ಕಾರು ಮತ್ತು ಆಟೋ ಡಿಕ್ಕಿ

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸಾವಿಗೀಡಾಗಿದ್ದಾರೆ.

some people died in road accident at Mandya, Car and auto collide in Mandya, Mandya accident news, ಮಂಡ್ಯದಲ್ಲಿ ರಸ್ತೆ ಅಪಘಾತದಲ್ಲಿ ಕೆಲವರು ಸಾವು, ಮಂಡ್ಯದಲ್ಲಿ ಕಾರು ಮತ್ತು ಆಟೋ ಡಿಕ್ಕಿ, ಮಂಡ್ಯ ಅಪಘಾತ ಸುದ್ದಿ,
ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ

By

Published : Jul 14, 2022, 12:12 PM IST

ಮಂಡ್ಯ: ಕಾರು ಮತ್ತು ಆಟೋ ನಡುವೆ ಕಳೆದ ರಾತ್ರಿ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ಮಳವಳ್ಳಿಯ ಕಣಿಗಲ್ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋದಲ್ಲಿದ್ದವರು ದಾರುಣವಾಗಿ ಸಾವಿಗೀಡಾಗಿದ್ದಾರೆ.

ಮೃತರನ್ನು ಬೆಂಗಳೂರು ಮೂಲದ ರವಿಕುಮಾರ್ (50), ಭಾಸ್ಕರ (48), ಮದ್ದೂರಿನ ಶ್ರೀನಿವಾಸ್ (35) ಎಂದು ಗುರುತಿಸಲಾಗಿದೆ. ರವಿಕುಮಾರ್ ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದು, ಹುಟ್ಟೂರಿಗೆ ಭೇಟಿ ನೀಡಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದರು.

ಇದನ್ನೂ ಓದಿ:ಉಡುಪಿ: ಸಚಿವರ ಎಸ್ಕಾರ್ಟ್ ವಾಹನ ಪಲ್ಟಿ, ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ ಕೋಟ ಶ್ರೀನಿವಾಸ ಪೂಜಾರಿ

ಕಾರಿನಲ್ಲಿದ್ದ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details