ಕರ್ನಾಟಕ

karnataka

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ... ಇಬ್ಬರು ಸಾವು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್​ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

By

Published : Dec 22, 2021, 2:14 AM IST

people died in Tractor overturns, Mandya road accident, Mnaday news, ಟ್ರಾಕ್ಟರ್​ ಪಲ್ಟಿಯಾಗಿ ಜನ ಸಾವು, ಮಂಡ್ಯ ರಸ್ತೆ ಅಪಘಾತ
ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ​ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬಿರುವಹಳ್ಳಿ ಗ್ರಾಮದ ಬಳಿ ನಡೆದಿದೆ.

ಚಂದಗೊಳಮ್ಮ ದೇಗುಲದಲ್ಲಿ ಪರ ಮಾಡಿ ಪರಿಕರಗಳ ಜೊತೆ ಗ್ರಾಮಕ್ಕೆ ವಾಪಸ್ಸು ಬರುವ ವೇಳೆ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್​ ಚಾಲಕನ ಅಜಾರುಕತೆಯಿಂದ ಈ ಅಪಘಾತ ಸಂಭವಿಸಿದೆ. ಕೆ.ಆರ್.ನಗರ ತಾಲ್ಲೂಕಿನ ತಂದ್ರೆ ಗ್ರಾಮದಿಂದ ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ 7 ಜನರು ಹಾಗೂ
ತಮ್ಮೇಗೌಡ (45) ಮತ್ತು ಬಲರಾಮ್ (11) ಸ್ಥಳದಲ್ಲೆ ಮೃತಪಟ್ಟ ದುರ್ದೈವಿಗಳು.

ಟ್ರ್ಯಾಕ್ಟರ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್.ಪೇಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡರು. ಈ ಘಟನೆ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ತಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details