ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಮೋದೂರು ಗ್ರಾಮದಲ್ಲಿ ನಡೆದಿದೆ. ರಾಜು(19) ಮತ್ತು ಪ್ರದೀಪ(21) ಮೃತ ದುರ್ದೈವಿಗಳು.
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು - KR Pate rural Police Station
ಕೆರೆಯಲ್ಲಿ ಈಜಲು ತೆರಳಿ ಯುವಕರು ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೋದೂರು ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದು ವಾರಸುದಾರರಿಗೆ ಒಪ್ಪಿಸಿದ್ದಾರೆ.
![ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು dsds](https://etvbharatimages.akamaized.net/etvbharat/prod-images/768-512-12097345-thumbnail-3x2-vish.jpg)
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಲಾಕ್ಡೌನ್ ಹಿನ್ನೆಲೆ ಮನೆಯಲ್ಲೇ ಇದ್ದ ಇಬ್ಬರು ಯುವಕರು ಈಜಲು ತೆರಳಿದ್ದಾರೆ. ಈ ವೇಳೆ ಕೆಸರಲ್ಲಿ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದು ವಾರಸುದಾರರಿಗೆ ಒಪ್ಪಿಸಿದ್ದಾರೆ. ಮೃತ ಯುವಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ:ಕೊರೊನಾ ದುಃಖ ಸಾಗರದಲ್ಲಿ ಜಾಗತಿಕ ಆರ್ಥಿಕತೆ: ಆಗಸದ ಎತ್ತರಕ್ಕೆ ಜಿಗಿದ ಚೀನಾ GDP... ಭಾರತದ್ದು?