ಕರ್ನಾಟಕ

karnataka

ETV Bharat / state

ರೆಸಾರ್ಟ್​ ರಾಜಕೀಯದ ವಿರುದ್ಧ ಆಕ್ರೋಶ: ಮದ್ದೂರಲ್ಲಿ ಪ್ರತಿಭಟನೆ - undefined

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ‌ಸಂಸ್ಕೃತಿ‌ ಆರಂಭವಾದ ಹಿನ್ನೆಲೆಯಲ್ಲಿ ಮದ್ದೂರಲ್ಲಿ ಕೆಂಪೇಗೌಡ ಒಕ್ಕಲಿಗ ಸಂಘದ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

Mandya

By

Published : Jul 9, 2019, 2:45 AM IST

ಮಂಡ್ಯ:ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ‌ಸಂಸ್ಕೃತಿ‌ ಆರಂಭವಾದ ಹಿನ್ನೆಲೆಯಲ್ಲಿ ಮದ್ದೂರಿನ ಮತದಾರರು ಪೊರಕೆ ಹಿಡಿದು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ರೆಸಾರ್ಟ್​ ರಾಜಕೀಯ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಮತದಾರರು

ಮದ್ದೂರಿನ ಟಿಬಿ ವೃತ್ತದಲ್ಲಿ ತಾಲೂಕು ಕೆಂಪೇಗೌಡ ಒಕ್ಕಲಿಗ ಸಂಘದ ಕಾರ್ಯಕರ್ತರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕೈಯಲ್ಲಿ ಪೊರಕೆ ಹಿಡಿದು ರಾಜೀನಾಮೆ ನೀಡಿರುವ ಶಾಸರ ವಿರುದ್ಧ ಘೋಷಣೆ ಕೂಗಿದರು. ಮುಂಬೈನಲ್ಲಿ ಕುಳಿತಿರುವ ಶಾಸಕರ ವಿರುದ್ಧ ಆಕ್ರೋಶ ಹೊರ ಹಾಕಿದರು.

ಶಾಸಕರು ಈ ರೀತಿ ಮಾಡವ ಬದಲು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮತದಾರರು ಕೊಟ್ಟ 5 ವರ್ಷದ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿ, ಪಕ್ಷದ ವರಿಷ್ಠರ ತೀರ್ಮಾನ ಪಾಲಿಸಬೇಕು ಎಂದು ಕಿವಿ ಮಾತು ಹೇಳಿದರು.

For All Latest Updates

TAGGED:

ABOUT THE AUTHOR

...view details