ಕರ್ನಾಟಕ

karnataka

ETV Bharat / state

ನಿರ್ಗತಿಕರಿಗೆ ಊಟ ನೀಡಿ ಮಾನವೀಯತೆ ಮೆರೆದ ಯುವಕರು - mandya news

ನಿರ್ಗತಿಕರು ಹಾಗೂ ಕೂಲಿ ಕಾರ್ಮಿಕರಿಗೆ ಯುವಕರು ಊಟ ನೀಡುವ ಮೂಲಕ ಮಾನವೀಯತೆ ಮೆರೆದ ಘಟನೆ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.

young-people-providing-food-for-poor-people
ನಿರ್ಗತಿಕರಿಗೆ ಊಟ ನೀಡಿ ಮಾನವೀಯತೆ ಮೆರೆದ ಯುವಕರು

By

Published : Mar 30, 2020, 5:31 PM IST

ಮಂಡ್ಯ: ನಿರ್ಗತಿಕರು ಹಾಗೂ ಕೂಲಿ ಕಾರ್ಮಿಕರಿಗೆ ಯುವಕರು ಊಟ ನೀಡುವ ಮೂಲಕ ಮಾನವೀಯತೆ ಮೆರೆದ ಘಟನೆ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ನಡೆದಿದೆ.

ವ್ಯಾಪಾರ ಸಂಬಂಧ ಹೊರ ರಾಜ್ಯ ಸೇರಿದಂತೆ ಹೊರ ಜಿಲ್ಲೆಗಳಿಂದ ಗ್ರಾಮಕ್ಕೆ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ಗ್ರಾಮದಲ್ಲಿ ವಾಸ ಮಾಡಿಕೊಂಡಿದ್ದವು. ಆದರೆ ವ್ಯಾಪಾರ ನಿಂತಿರುವುದರಿಂದ ಆಹಾರ ಸಾಮಾಗ್ರಿಗಳ ಸಮಸ್ಯೆ ತಲೆದೋರಿತ್ತು. ಇದನ್ನು ಮನಗಂಡ ಗ್ರಾಮದ ಯುವ ಪಡೆ ಸುಮಾರು 60ಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.

ಸಂತೆ ಮೈದಾನದಲ್ಲಿ ಈ ಕುಟುಂಬಗಳು ವಾಸ ಮಾಡಿಕೊಂಡಿದ್ದು, ಊಟಕ್ಕಾಗಿ ಪರಿತಪಿಸುತ್ತಿದ್ದರು. ಹೀಗಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.

ABOUT THE AUTHOR

...view details