ಕರ್ನಾಟಕ

karnataka

ETV Bharat / state

ಬೋನಿಗೆ ಬಿದ್ದ ಹೆಣ್ಣು ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗ್ರಾಮಕ್ಕೆ ನುಗ್ಗಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹೆಣ್ಣು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

By

Published : Aug 6, 2019, 6:39 PM IST

ಬೋನಿಗೆ ಬಿದ್ದ ಹೆಣ್ಣು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು:ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿರುವ ಆಡು, ಕುರಿ, ಹಸುವಿನ ಕರುಗಳನ್ನು ಕೊಂದು ತಿನ್ನುತ್ತಿದ್ದ ಹೆಣ್ಣು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ಬೋನಿಗೆ ಬಿದ್ದ ಹೆಣ್ಣು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಾಮಲಾಪುರದ ಗುರು ಪ್ರಸಾದ್ ಎಂಬುವರ ತೆಂಗಿನ ತೋಟದಲ್ಲಿ ಇಟ್ಟಿದ್ದ ಅರಣ್ಯ ಇಲಾಖೆಯ ಬೋನಿಗೆ ಈ ಚಿರತೆ ಬಿದ್ದಿದೆ. ಇದನ್ನು ನಾಗರಹೊಳೆಯ ಅಭಯಾರಣ್ಯಕ್ಕೆ ಬಿಡಲಾಗಿದೆ. ಚಿರತೆಯಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಸದ್ಯಕ್ಕೆ ನೆಮ್ಮದಿಯ ನಿಟ್ಟುಸಿರುವ ಬಿಟ್ಟಿದ್ದಾರೆ. ಈ ಭಾಗದಲ್ಲಿ ಇನ್ನೂ ಹೆಚ್ಚಿನ ಚಿರತೆಗಳಿದ್ದು, ಕೂಡಲೇ ಅವುಗಳನ್ನು ಸಹ ಬೋನು ಹಾಕಿ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ.

ABOUT THE AUTHOR

...view details