ಕರ್ನಾಟಕ

karnataka

ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ‌ ಹಿನ್ನೆಲೆಯಲ್ಲಿ ಉಪ ಆಯುಕ್ತ ನಾಗರಾಜು ಅವರ ಕಚೇರಿ ಮತ್ತು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

By

Published : Aug 26, 2020, 11:50 AM IST

Published : Aug 26, 2020, 11:50 AM IST

ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ
ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ

ಮೈಸೂರು: ಮಹಾನಗರ ಪಾಲಿಕೆಯ ಉಪ ಆಯುಕ್ತರ ಕಚೇರಿ ಮತ್ತು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ವಲಯ 6ರ ಉಪ ಆಯುಕ್ತ ನಾಗರಾಜು ಮನೆ ಮೇಲೆ ಬೆಂಗಳೂರು ಎಸಿಬಿ ಎಸ್ಪಿ ಮಾರ್ಗದರ್ಶನದಲ್ಲಿ ರಾಮನಗರದ ಡಿವೈಎಸ್​​ಪಿ ನೇತೃತ್ವದಲ್ಲಿ ಬೆಂಗಳೂರಿನಿಂದ ಬಂದ ತಂಡ ಕುವೆಂಪು ನಗರ ನಿವಾಸ, ಪಾಲಿಕೆಯ 6 ವಲಯ ಕಚೇರಿ ಹಾಗೂ ರಾಮನಗರದ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದೆ.

ನಾಗರಾಜು ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ‌ ಹಿನ್ನೆಲೆಯಲ್ಲಿ ಎಸಿಬಿ ದಾಳಿ ನಡೆದಿದೆ ಎನ್ನಲಾಗಿದೆ.

ABOUT THE AUTHOR

...view details