ಮೈಸೂರು:ಭಿಕ್ಷುಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಫಿಕ್, ಮಂಜುನಾಥ್, ಕೃಷ್ಣ ಮನು, ರೇವಣ್ಣ ಬಂಧಿತ ಆರೋಪಿಗಳು. ಬಂಧಿತರೆಲ್ಲಾ ಕೂಲಿ ಕಾರ್ಮಿಕರಾಗಿದ್ದಾರೆ.
ಮೈಸೂರು:ಭಿಕ್ಷುಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಫಿಕ್, ಮಂಜುನಾಥ್, ಕೃಷ್ಣ ಮನು, ರೇವಣ್ಣ ಬಂಧಿತ ಆರೋಪಿಗಳು. ಬಂಧಿತರೆಲ್ಲಾ ಕೂಲಿ ಕಾರ್ಮಿಕರಾಗಿದ್ದಾರೆ.
ಓದಿ:ಸಾಂಸ್ಕೃತಿಕ ನಗರಿಯಲ್ಲಿ ಹೀನ ಕೃತ್ಯ: ಭಿಕ್ಷುಕಿಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್!
ಮೃತ ಮಹಿಳೆ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಳು. ಮೈಸೂರಿನ ಕೆ.ಟಿ. ಸ್ಟ್ರೀಟ್ ಬಳಿ ಫೆ.15 ರ ರಾತ್ರಿ ಭಿಕ್ಷುಕಿಗೆ ಮದ್ಯ ಕುಡಿಸಿ ನಂತರ ಆಕೆ ಮೇಲೆ ಅತ್ಯಾಚಾರ ಎಸಗಿದ್ದರು. ಬಳಿಕ ಸಂತ್ರಸ್ತೆಯನ್ನು ಅಮಾನುಷವಾಗಿ ಕೊಲೆ ಮಾಡಿದ್ದರು. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯದ ಆಧಾರದ ಮೇಲೆ ನಾಲ್ವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ತಪ್ಪಿಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಕರಣ ಸಂಬಂಧ ಲಷ್ಕರ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 376ರಡಿ ಸುಮೊಟೋ ಕೇಸ್ ದಾಖಲಾಗಿದೆ.