ಕರ್ನಾಟಕ

karnataka

ETV Bharat / state

ಮೈಸೂರು: ಬೈಕ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರ ದುರ್ಮರಣ - ಕಾರು ಚಾಲಕ ಠಾಣೆಗೆ ಶರಣಾಗಿದ್ದಾನೆ

ಬೈಕ್​ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್​ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಪೊಲೀಸ್​ ಠಾಣೆಗೆ ಶರಣಾಗಿದ್ದಾರೆ.

Bike Car Accident
ಬೈಕ್​ಗೆ ಕಾರು ಡಿಕ್ಕಿ

By

Published : Sep 19, 2022, 3:55 PM IST

ಮೈಸೂರು: ಕಾರು ಹಾಗೂ ಬೈಕ್ ಡಿಕ್ಕಿ ಹೊಡೆದು, ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹೆಗ್ಗೋಠರು ಗ್ರಾಮದ ಮಹೇಶ್ (50)ಹಾಗೂ ಮಹದೇವಪ್ಪ(55) ಮೃತ ದುರ್ದೈವಿಗಳಾಗಿದ್ದಾರೆ.

ನಂಜನಗೂಡಿನಲ್ಲಿ‌ ಗಾರೆ ಕೆಲಸ ಮುಗಿಸಿಕೊಂಡು ಹೋಗುವಾಗ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಗೋಳೂರು ಗ್ರಾಮದ ವಿದ್ಯಾಪೀಠದ ಬಳಿ ಎದುರುಗಡೆಯಿಂದ ಬಂದ ಕಾರಿನ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಕೆಳಗಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್​ಗೆ ಕಾರು ಡಿಕ್ಕಿ.. ಸ್ಥಳದಲ್ಲಿಯೇ ಇಬ್ಬರ ದುರ್ಮರಣ

ವಿಷಯ ತಿಳಿದು ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಠಾಣೆಗೆ ಹೋಗಿ ಶರಣಾಗಿದ್ದಾರೆ.

ಇದನ್ನೂ ಓದಿ:ರಾಯಚೂರು: ಹಸು ತಪ್ಪಿಸಲು ಯತ್ನಿಸಿ ಕಾರು ಪಲ್ಟಿ, ಮಹಿಳೆ ಸಾವು, ಬಾಲಕಿ ಗಂಭೀರ

ABOUT THE AUTHOR

...view details