ಮೈಸೂರು:ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ತಮ್ಮ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಮಾದಕ ವಸ್ತುಗಳು ಹಾಗೂ ಸೈಬರ್ ಅಪರಾಧಗಳ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ; ಸೈಬರ್ ಠಾಣೆಗೆ ದೂರು ನೀಡಿದ ಬಿಜೆಪಿ ಅಭ್ಯರ್ಥಿ - Southern Graduate constituency BJP candidate
ರವಿಶಂಕರ್ಗೆ ನಿಮ್ಮ ವೋಟು, ನಿಮ್ಮ ಅಕೌಂಟ್ಗೆ ಪೇಮೆಂಟು... ಎಂಬ ಸಂದೇಶ ಇರುವ ಲಿಂಕ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಖುದ್ದು ಅವರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
![ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ; ಸೈಬರ್ ಠಾಣೆಗೆ ದೂರು ನೀಡಿದ ಬಿಜೆಪಿ ಅಭ್ಯರ್ಥಿ BJP candidate complaining to cyber station](https://etvbharatimages.akamaized.net/etvbharat/prod-images/768-512-15379063-894-15379063-1653456872168.jpg)
ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್
ಮೈ.ವಿ.ರವಿಶಂಕರ್ ಅಭಿಮಾನಿ ಬಳಗ ಎಂಬ ಹೆಸರಿನಲ್ಲಿ ನನ್ನ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಮತದಾರರಿಗೆ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಕಳುಹಿಸುವುದಾಗಿ ಅಪಪ್ರಚಾರ ನಡೆಸಲಾಗುತ್ತಿದೆ.
ರವಿಶಂಕರ್ಗೆ ನಿಮ್ಮ ವೋಟು, ನಿಮ್ಮ ಅಕೌಂಟ್ಗೆ ಪೇಮೆಂಟು... ಎಂಬ ಸಂದೇಶಗಳಿರುವ ಲಿಂಕ್ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದು ನನ್ನ ಹೆಸರಿಗೆ ಹಾಗೂ ನಮ್ಮ ಪಕ್ಷಕ್ಕೆ ಕಳಂಕ ತರುವ ಪ್ರಯತ್ನ. ಕೂಡಲೇ ಪೊಲೀಸರು ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ರವಿಶಂಕರ್ ದೂರಿನಲ್ಲಿ ಒತ್ತಾಯಿಸಿದ್ದಾರೆ.