ಕರ್ನಾಟಕ

karnataka

ETV Bharat / state

ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ; ಸೈಬರ್ ಠಾಣೆಗೆ ದೂರು ನೀಡಿದ ಬಿಜೆಪಿ ಅಭ್ಯರ್ಥಿ - Southern Graduate constituency BJP candidate

ರವಿಶಂಕರ್​ಗೆ ನಿಮ್ಮ ವೋಟು, ನಿಮ್ಮ ಅಕೌಂಟ್​ಗೆ ಪೇಮೆಂಟು... ಎಂಬ ಸಂದೇಶ ಇರುವ ಲಿಂಕ್​​ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಖುದ್ದು ಅವರೇ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾರೆ.

BJP candidate complaining to cyber station
ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್

By

Published : May 25, 2022, 11:11 AM IST

ಮೈಸೂರು:ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ತಮ್ಮ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಮಾದಕ ವಸ್ತುಗಳು ಹಾಗೂ ಸೈಬರ್ ಅಪರಾಧಗಳ ಠಾಣೆಗೆ ದೂರು ನೀಡಿದ್ದಾರೆ.


ಮೈ.ವಿ.ರವಿಶಂಕರ್ ಅಭಿಮಾನಿ ಬಳಗ ಎಂಬ ಹೆಸರಿನಲ್ಲಿ ನನ್ನ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಮತದಾರರಿಗೆ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಕಳುಹಿಸುವುದಾಗಿ ಅಪಪ್ರಚಾರ ನಡೆಸಲಾಗುತ್ತಿದೆ.


ರವಿಶಂಕರ್​ಗೆ ನಿಮ್ಮ ವೋಟು, ನಿಮ್ಮ ಅಕೌಂಟ್​ಗೆ ಪೇಮೆಂಟು... ಎಂಬ ಸಂದೇಶಗಳಿರುವ ಲಿಂಕ್​​ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದು ನನ್ನ ಹೆಸರಿಗೆ ಹಾಗೂ ನಮ್ಮ ಪಕ್ಷಕ್ಕೆ ಕಳಂಕ ತರುವ ಪ್ರಯತ್ನ. ಕೂಡಲೇ ಪೊಲೀಸರು ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ರವಿಶಂಕರ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

ABOUT THE AUTHOR

...view details