ಕರ್ನಾಟಕ

karnataka

ಹುಣಸೂರಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್​​​ಗೆ ಗೆಲುವು: ಪರಮೇಶ್ವರ್​​​​

ಮೈಸೂರಿನ ಹುಣಸೂರಲ್ಲಿ ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಮಂಜುನಾಥ್​ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್​​ ವಿಶ್ವಾಸ ವ್ಯಕ್ತಪಡಿಸಿದರು.

By

Published : Nov 25, 2019, 5:21 PM IST

Published : Nov 25, 2019, 5:21 PM IST

ಹುಣಸೂರಲ್ಲಿ ಪರಮೇಶ್ವರ್​ರಿಂದ ಉಪಚುನಾವಣಾ ಪ್ರಚಾರ

ಮೈಸೂರು: ಹುಣಸೂರು ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಮಂಜುನಾಥ್​ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್​ ವಿಶ್ವಾಸ ವ್ಯಕ್ತಪಡಿಸಿದರು.

ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯ ನಂತರ ಮಾತನಾಡಿದ ಅವರು, ಹುಣಸೂರಿನಲ್ಲಿ ಕಾಂಗ್ರೆಸ್​ ಗೆಲುವು ಖಚಿತ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಚುನಾವಣೆಗಳಲ್ಲಿ ಪಕ್ಷಾಂತರಿಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ರಾಜಕಾರಣಿಗಳು ಭಾಷಣ ಮಾಡ್ತಾರೆ. ಆದರೆ ಮತದಾರರು ಸೈಲೆಟಾಂಗಿ ಅನರ್ಹರಿಗೆ ಉತ್ತರ ಕೊಡುತ್ತಾರೆ ಎಂದರು.

ಹುಣಸೂರಲ್ಲಿ ಪರಮೇಶ್ವರ್​ ಪ್ರಚಾರ

ಇನ್ನು ಕಾಂಗ್ರೆಸ್​ನಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಆದರೆ ಸಿದ್ದರಾಮಯ್ಯನವರು ಏಕಾಂಗಿಯಾಗಿದ್ದಾರೆ ಎಂದು ಬಿಜೆಪಿಯವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್​​ ನಿರ್ಣಯಿಸುತ್ತೆ. ಅದಕ್ಕೂ ಮುನ್ನ ಜನರ ನಿರ್ಧಾರ ಮುಖ್ಯವಾಗಿರುತ್ತದೆ ಎಂದು ಮಾಧ್ಯವದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದಕ್ಕೂ ಮುನ್ನ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ABOUT THE AUTHOR

...view details