ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ರಸ್ತೆ ಬದಿಯ ಅಂಗಡಿ ಮುಂಗಟ್ಟುಗಳನ್ನು ತಹಶಿಲ್ದಾರ್ ನೇತೃತ್ವದಲ್ಲಿ ಇಂದು ಬೆಳಗ್ಗೆ ತೆರವುಗೊಳಿಸುವ ಬಗ್ಗೆ ತಿಳಿದ ವ್ಯಾಪಾರಿಗಳು, ಕೂಡಲೇ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ಗಮನಕ್ಕೆ ತಂದಿದ್ದಾರೆ. ಅವರಿಗೆ ಸ್ಪಂದಿಸಿರುವ ಶಾಸಕ ಜಿ.ಟಿ. ದೇವೇಗೌಡ ಅವರು ತಹಶಿಲ್ದಾರ್ ರಮೇಶ್ ಬಾಬು ಅವರಿಗೆ ಕರೆ ಮಾಡಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ ಮುಂದಿನ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿರುವ ನಾಯಕರ ಸಮುದಾಯ ಭವನದಲ್ಲಿ, ಮುಖಂಡರು ಹಾಗೂ ವ್ಯಾಪಾರಿಗಳೊಂದಿಗೆ ತಹಶಿಲ್ದಾರ್ ರಮೇಶ್ ಬಾಬು ನಿನ್ನೆಯೇ ಸಭೆ ನಡೆಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.