ಕರ್ನಾಟಕ

karnataka

By

Published : Mar 10, 2022, 3:19 PM IST

ETV Bharat / state

ಸಂಸದೆ ಸುಮಲತಾ ಅಂಬರೀಶ್​ ಕಾರು ಚಾಲಕನಿಗೆ ಥಳಿತ: 7 ಮಂದಿ ವಿರುದ್ಧ ಕೇಸ್​

ಮುಂಜನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ವಿಚಾರದಲ್ಲಿ ಸಂಸದೆ ಸುಮಲತಾ ಅಂಬರೀಶ್​ ಹಾಗೂ ಜೆಡಿಎಸ್​ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ಸಂಬಂಧ ಸುಮಲತಾ ಏಳು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

Clash between MP Sumalatha ambarish and JDS activists
ಸಂಸದೆ ಸುಮಲತಾ ಅಂಬರೀಷ್ ಮತ್ತು ಜೆಡಿಎಸ್​​ ಕಾರ್ಯಕರ್ತ ನಡುವೆ ಜಗಳ

ಮೈಸೂರು:ಮುಂಜನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಸಂಬಂಧ ಜೆಡಿಎಸ್‌ ಕಾರ್ಯಕರ್ತರು ಹಾಗೂ ಮಂಡ್ಯ ಸಂಸದೆ ಸುಮಲತಾ ಬೆಂಬಲಿಗರ ಮಧ್ಯೆ ಘರ್ಷಣೆ ಉಂಟಾಗಿದೆ. ಈ ಸಂದರ್ಭದಲ್ಲಿ ಸುಮಲತಾ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿದೆ.

ಮುಂಜನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವ ವೇಳೆ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್ ಅನುಪಸ್ಥಿತಿಯಲ್ಲಿ ಭೂಮಿಪೂಜೆ ನೆರವೇರಿಸಬಾರದು ಎಂದು ಜೆಡಿಎಸ್‌ ಕಾರ್ಯಕರ್ತರು ಸುತ್ತುವರೆದು ಘೋಷಣೆ ಕೂಗಿದರು. ಆದರೆ ಸುಮಲತಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದು ಸಂಸದರ ನಿಧಿಯಿಂದ ಮಾಡುತ್ತಿರುವ ಕಾಮಗಾರಿ. ಹೀಗಾಗಿ ಶಾಸಕರು ಇಲ್ಲದೆಯೂ ಭೂಮಿಪೂಜೆ ನೆರವೇರಿಸಬಹುದು ಎಂದು ಹೇಳಿದಾಗ ಘರ್ಷಣೆ ಆರಂಭವಾಗಿತ್ತು.

ಸಂಸದೆ ಸುಮಲತಾ ಅವರು ಭೂಮಿ ಪೂಜೆ ನೆರವೇರಿಸಲು ಮುಂದಾಗುತ್ತಿದ್ದಂತೆ ಗುಂಪೊಂದು ಸುಮಲತಾ ಕಾರಿನ ಚಾಲಕ ನಂಜುಂಡ ಎಂಬುವವರನ್ನು ಥಳಿಸಿತು. ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿದರು. ಗಾಯಗೊಂಡ ನಂಜುಂಡ ಅವರನ್ನು ಕೆ.ಆರ್. ನಗರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಕೆಲವು ಮಹಿಳೆಯರು ಕಾಮಗಾರಿಗೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎಂದು ಸುಮಲತಾ ಅವರ ಬೆಂಬಲಕ್ಕೆ ನಿಂತರು.

ಈ ಸಂಬಂಧ ಸಂಸದೆ ಸುಮಲತಾ ಅಂಬರೀಶ್, ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಕಾರ್ಯಕರ್ತರಾದ ಅನೀಫ್ ಗೌಡ, ಧನು ಸೇರಿದಂತೆ 7 ಮಂದಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಒದಿ: 'ಅಧಿಕಾರಿಗಳಿಂದ ಅಗೌರವ': ಗುದ್ದಲಿ ಪೂಜೆ ಮಾಡದೆ ವಾಪಸಾದ ಸುಮಲತಾ ಅಂಬರೀಶ್

For All Latest Updates

TAGGED:

ABOUT THE AUTHOR

...view details