ಮೈಸೂರು: ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗ ಬರುತ್ತಿರುವ ಹೆಸರುಗಳ ವಿಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ. ಪಕ್ಷದ ಮುಖಂಡರ ಜೊತೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ದಸರಾ ಉದ್ಘಾಟಕರಾದ ಎಸ್.ಎಲ್. ಭೈರಪ್ಪ ಅವರ ಮನೆಗೆ ಆಗಮಿಸಿ, ಅವರಿಗೆ ಸನ್ಮಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಔರಾಧ್ಕರ್ ವರದಿಯನ್ನು ನಾಲ್ಕೈದು ದಿನಗಳಲ್ಲಿ ಜಾರಿ ಮಾಡಲು ಪ್ರಯತ್ನಿಸುತ್ತೇವೆ. ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹಲವಾರು ಹೆಸರುಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟನೆ ನೀಡಿದರು.