ಕರ್ನಾಟಕ

karnataka

ವಿಜಯದಶಮಿ ಮೆರವಣಿಗೆ ಉದ್ಘಾಟನೆ: ನಾಳೆ ಮೈಸೂರಿಗೆ ಸಿಎಂ

By

Published : Oct 25, 2020, 4:42 PM IST

ವಿಜಯದಶಮಿ ಹಿನ್ನೆಲೆಯಲ್ಲಿ ನಾಳೆ ಮೈಸೂರಿಗೆ ಆಗಮಿಸಲಿರುವ ಸಿಎಂ ಯಡಿಯೂರಪ್ಪ,‌ ಚಾಮುಂಡೇಶ್ವರಿ ತಾಯಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆ ಉದ್ಘಾಟಿಸಲಿದ್ದಾರೆ.

Yadiyurappa
Yadiyurappa

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ ವಿಜಯದಶಮಿಯಂದು ಜಿಲ್ಲೆಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಲಲಿತ ಮಹಲ್ ಹೆಲಿಪ್ಯಾಡ್‍ಗೆ ಆಗಮಿಸುವ ಅವರು, ರಸ್ತೆ ಮೂಲಕ 12.30ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 2.45ಕ್ಕೆ ಅರಮನೆ ಆವರಣಕ್ಕೆ ಆಗಮಿಸುವ ಸಿಎಂ ಮಧ್ಯಾಹ್ನ 2.59 ರಿಂದ 3.20 ರೊಳಗೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವರು.

ನಂತರ 3.40 ರಿಂದ 4.15 ರೊಳಗೆ ಚಾಮುಂಡೇಶ್ವರಿ ತಾಯಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆ ಉದ್ಘಾಟಿಸುವರು. ಬಳಿಕ 4.30 ಗಂಟೆಗೆ ಲಲಿತ ಮಹಲ್ ಹೆಲಿಪ್ಯಾಡ್‍ನಲ್ಲಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ABOUT THE AUTHOR

...view details