ಮೈಸೂರು: ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ನಡೆದಿತ್ತು. ಆ ಸುದ್ದಿ ಮಾಸುವ ಮುನ್ನವೇ ಇದೀಗ ಅವರ ಆಪ್ತನ ಕೊಲೆ ಯತ್ನ ಸಹ ನಡೆದಿದೆ.
ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ರಜನಿ ಅಣ್ಣಯ್ಯ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮದೇವತೆಯ ಹಬ್ಬದ ವೇಳೆ ಲಾಂಗು ಬೀಸಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕಾಂಗ್ರೆಸ್ ಮುಖಂಡರಾಗಿರುವ ರಜನಿ ಅಣ್ಣಯ್ಯ ಜಾತ್ರೆಯಲ್ಲಿ ಭಾಗಿಯಾಗಿದ್ದರು. ರಾಜಕೀಯ ವೈಷಮ್ಯದಿಂದಲೇ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಯರಗನಹಳ್ಳಿಯ ಮಹದೇವು ಹಾಗೂ ಚಿದಂಬರಂ ಈ ಕೃತ್ಯವೆಸಗಿದ್ದಾರೆ. ತಕ್ಷಣವೇ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಪಿಗಳಲ್ಲಿ ಒಬ್ಬ ಮಹದೇವನನ್ನ ಗ್ರಾಮಸ್ಥರು ಹಿಡಿದು ಪೊಲೀಸರ ವಶಕ್ಕೆ ನೀಡಲಾಗಿದ್ದು, ಇನ್ನೋರ್ವ ಆರೋಪಿ ಚಿದಂಬರಂ ಪರಾರಿಯಾಗಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ಯರಗನಹಳ್ಳಿಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.