ಕರ್ನಾಟಕ

karnataka

By

Published : Dec 11, 2022, 2:11 PM IST

ETV Bharat / state

ಪಕ್ಷ ಒಪ್ಪಿದ್ರೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ: ಬಿ ವೈ ವಿಜಯೇಂದ್ರ

ಸ್ಪರ್ಧೆಯಲ್ಲಿ ಪಕ್ಷದ ತೀರ್ಮಾನವೇ ಅಂತಿಮ. ಎಲ್ಲಾ ಸವಾಲುಗಳನ್ನು ನಾನು ಎದುರಿಸುತ್ತೇನೆ. ನಾನು ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ ಎಂದು ಬಿ ವೈ‌ ವಿಜಯೇಂದ್ರ ಹೇಳಿದ್ದಾರೆ.

BJP State Vice President B Y Vijayendra
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ‌ ವಿಜಯೇಂದ್ರ

ಮೈಸೂರು: ಪಕ್ಷ ಒಪ್ಪಿದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ‌ ವಿಜಯೇಂದ್ರ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವರುಣಾ ಕ್ಷೇತ್ರದಲ್ಲಿ‌ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ನಿಭಾಯಿಸುತ್ತೇನೆ ಎಂದರು.

ಸ್ಪರ್ಧೆಯಲ್ಲಿ ಪಕ್ಷದ ತೀರ್ಮಾನವೇ ಅಂತಿಮ. ಎಲ್ಲಾ ಸವಾಲುಗಳನ್ನು ನಾನು ಎದುರಿಸುತ್ತೇನೆ. ನಾನು ವರುಣಾ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲೂ ಸಂಘಟನೆ ಮಾಡುತ್ತಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಪಡೆಯಲು ಹೋರಾಟ ಮಾಡುತ್ತಿದ್ದೇವೆ. ಹೀಗಾಗಿ ಇಲ್ಲಿ ಸಂಘಟನೆ ಹೆಚ್ಚು ಮಾಡಿದ್ದೇವೆ ಎಂದರು.

ಮೋದಿ ಎಂಬುದು ಬರಿ ಅಲೆ ಅಲ್ಲ, ಅದೊಂದು ಸುನಾಮಿ: ಕಾಂಗ್ರೆಸ್​ನವರಿಗೆ ಇದು ಇನ್ನೂ ಅರ್ಥವಾಗಿಲ್ಲ. ಕಾಂಗ್ರೆಸ್ ಭ್ರಮೆಯಲ್ಲಿದೆ. ಭ್ರಮೆಯಲ್ಲಿರುವ ಕಾರಣ ಗುಜರಾತ್ ಫಲಿತಾಂಶದ ಎಫೆಕ್ಟ್ ಕರ್ನಾಟಕದಲ್ಲಿ ಆಗಲ್ಲ ಎಂದು ಹೇಳುತ್ತಿದೆ. ಚುನಾವಣೆ ನಂತರ ಕಾಂಗ್ರೆಸ್​ಗೆ ಉತ್ತರ‌ ಸಿಗಲಿದೆ ಎಂದು ಹೇಳಿದರು.

ಇದನ್ನೂ ಓದಿ:ಬೈಕ್ ರ್‍ಯಾಲಿಯಲ್ಲಿ ಮಿಂಚಿದ ಬಿಎಸ್​ವೈ ಪುತ್ರರು.. ಶಿಕಾರಿಪುರದಲ್ಲಿ ರಾಘವೇಂದ್ರ, ವಿಜಯೇಂದ್ರ ಸಂಚಾರ

ABOUT THE AUTHOR

...view details