ಕರ್ನಾಟಕ

karnataka

By

Published : Jun 10, 2021, 3:15 AM IST

ETV Bharat / state

ಮೈಸೂರು ಮೇಯರ್ ಚುನಾವಣೆ : ಪಕ್ಷದ ತೀರ್ಮಾನಕ್ಕೆ ಬದ್ಧ ಎಂದ ತನ್ವೀರ್ ಸೇಠ್

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಕಾರ್ಪೋರೇಟರ್‌ಗಳ ಸಭೆ ನಡೆಯಿತು‌. ಬಳಿಕ ಮಾತನಾಡಿದ ಶಾಸಕ ತನ್ವೀರ್ ಸೇಠ್, ಪಕ್ಷದ ವರಿಷ್ಠರ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.

corporation-mayors-selection-to-be-decided-by-party-mla-tanveer-seth
ತನ್ವೀರ್ ಸೇಠ್

ಮೈಸೂರು:ಮಹಾನಗರ ಪಾಲಿಕೆಮೇಯರ್ ಚುನಾವಣೆ ಅನಿರೀಕ್ಷಿತವಾಗಿ ಎದುರಾಗಿದೆ. ಅಭಿಪ್ರಾಯ ಸಂಗ್ರಹಕ್ಕೆ ಸಭೆ ಕರೆದಿದ್ದೆವು. ಮೇಯರ್ ಆಯ್ಕೆ ಸಂಬಂಧ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಕಾರ್ಪೋರೇಟರ್‌ಗಳ ಸಭೆಯು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು‌. ಬಳಿಕ ಮಾತನಾಡಿದ ಶಾಸಕರು, ಪಕ್ಷದ ವರಿಷ್ಠರ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಎಲ್ಲರೂ ಹೇಳಿದ್ದಾರೆ. ಇದರ ಬಗ್ಗೆ ನನಗೆ ಧ್ವನಿ ಇಲ್ಲ ಎಂದರು.

ಮೈತ್ರಿ ಸಂಬಂಧ ಪಕ್ಷವು ತೀರ್ಮಾನ ತೆಗೆದುಕೊಳ್ಳಲಿದೆ. ಶಾಸಕ ಸಾ.ರಾ. ಮಹೇಶ್ ಏನು ಷರತ್ತು ಹಾಕಿದ್ದಾರೋ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ABOUT THE AUTHOR

...view details