ಮೈಸೂರು:ಕಾಡಾನೆ ದಾಳಿಯಿಂದ ಹಸುವೊಂದು ಬಲಿಯಾಗಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಬಳಿ ಇರುವ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಿಕ್ಕೇರಿ ಕಟ್ಟೆ ಕಡೆಯ ಕಲ್ಲುಮಂಟಿ ಭಾಗದಿಂದ ಈ ಕಾಡಾನೆ ಬಂದಿದ್ದು, ಹೆಬ್ಬಾಳ ಗ್ರಾಮದಲ್ಲಿ ಅಟ್ಟಹಾಸ ಮೆರೆದಿದೆ.
ಕಾಡಾನೆ ಹಾವಳಿಗೆ ಹಸು ಬಲಿಯಾಯ್ತು.. ಗ್ರಾಮಸ್ಥರ ಗೋಳು ಕೇಳೋರು ಯಾರು..? - mysore latest news
ಮೈಸೂರಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅದರ ಸುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಈ ನಡುವೆ ಕಾಡಾನೆ ದಾಳಿಗೆ ಹಸುವೊಂದು ಬಲಿಯಾಗಿದೆ.
![ಕಾಡಾನೆ ಹಾವಳಿಗೆ ಹಸು ಬಲಿಯಾಯ್ತು.. ಗ್ರಾಮಸ್ಥರ ಗೋಳು ಕೇಳೋರು ಯಾರು..? cow death due to elephant attack in Mysore](https://etvbharatimages.akamaized.net/etvbharat/prod-images/768-512-5705405-thumbnail-3x2--ele.jpg)
ಕಾಡಾನೆ ದಾಳಿಗೆ ಹಸು ಬಲಿ
ಹೆಬ್ಬಾಳ ಗ್ರಾಮದ ನಿವಾಸಿಯಾದ ವೆಂಕಟೇಶ್ ಶೆಟ್ಟಿ ಅವರು ಮನೆ ಮುಂದೆ ಕಟ್ಟಿದ್ದ ಹಸುವಿನ ಮೇಲೆ ಕಾಡಾನೆ ದಾಳಿ ನಡೆಸಿದ ಕಾರಣ ಹಸು ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ವಿಫಲವಾಗಿದಾರೆ ಎಂದು ಆರೋಪಿಸಿದ್ದಾರೆ. ಈ ಹಿಂದೆ ಸಮಸ್ಯೆ ಪರಿಹಾರ ಮಾಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.