ಮೈಸೂರು:ಆಧುನಿಕ ಯುಗದ ಗ್ರಾಫಿಕ್ಸ್ಗೆ ಬಲಿಪಶು ಆಗುವ ಭಯ ನಮಗೆ ಕಾಡುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಕೋರ್ಟ್ ಮೊರೆ ಹೋದ ಸಚಿವರನ್ನು ಸಮರ್ಥಿಸಿಕೊಂಡಿದ್ದಾರೆ.
ಶ್ರೀಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಗ್ರಾಫಿಕ್ಸ್ ಯುಗ. ಅದಕ್ಕಾಗಿ ಮಾನ-ಮರ್ಯಾದೆಗೆ ಅಂಜಿದ್ದೇವೆ. ದೃಶ್ಯ ಮಾಧ್ಯಮಗಳನ್ನು ತಿರುಚುವ, ಧ್ವನಿ ನೀಡುವ ಕೆಲಸ ಆಗುತ್ತಿದೆ. ಗ್ರಾಫಿಕ್ಸ್ ಮೂಲಕ ಕೈ, ಕಾಲು, ತಲೆ ಕತ್ತರಿಸಿದಂತೆ ಮಾಡಬಹುದು. ಸಿನಿಮಾದಿಂದ ಬಂದ ನನಗೆ ಅದೆಲ್ಲಾ ಗೊತ್ತಿದೆ. ಸಚಿವರು ಗೌರವದ ಕಾರಣಕ್ಕಾಗಿ ಕೋರ್ಟ್ ಮೊರೆ ಹೋಗಿದ್ದಾರೆಂದು ಅವರು ಹೇಳಿದರು.
ಸುಳ್ಳು ಬೇಗ ಹರಡುತ್ತದೆ. ಅದು ಸುಳ್ಳು ಎಂದು ಸಾಬೀತಾಗಲು ಸಮಯ ಬೇಕು. ಆದರೆ ಮಾಧ್ಯಮದಲ್ಲಿ ಬಂದ ಕೂಡಲೇ ಅದನ್ನು ಜನ ನಂಬುತ್ತಾರೆ. ಆದರೆ ಸತ್ಯ ಹೊರಬರುವುದು ಪೊಲೀಸ್ ತನಿಖೆಯ ಮೂಲಕ. ಅದಕ್ಕಾಗಿ ನಾವೆಲ್ಲಾ ಭಯಪಡುತ್ತಿದ್ದೇವೆ ಎಂದು ಸಿ.ಪಿ.ಯೋಗೋಶ್ವರ್ ತಿಳಿಸಿದರು.