ಕರ್ನಾಟಕ

karnataka

By

Published : Oct 14, 2020, 7:08 PM IST

ETV Bharat / state

ದಸರಾಗೆ ಹೊರಡುವ ಮುನ್ನ ಸರ್ಕಾರ ವಿಧಿಸಿದ ಮಾರ್ಗಸೂಚಿಗಳೇನು ತಿಳಿದುಕೊಳ್ಳಿ..

ಕೊರೊನಾ ಹಿನ್ನೆಲೆ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ಮುಂದಾಗಿದ್ದು, ವಿಶೇಷ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

dasara
ದಸರಾ ಮಹೋತ್ಸವ

ಮೈಸೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ, ಸರಳವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ. ಅಕ್ಟೋಬರ್ 17ರಂದು ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯಾಗಲಿದ್ದು ಕಾರ್ಯಕ್ರಮಕ್ಕೆ 200 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು:

  • ದಸರಾ ಜಂಬೂಸವಾರಿಯಲ್ಲಿ 300 ಮಂದಿಗೆ ಅವಕಾಶ
  • ಅರಮನೆ ಆವರಣದಲ್ಲಿ 50 ಮಂದಿಗೆ ಮಾತ್ರ ಅವಕಾಶ
  • ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 50 ಜನಕ್ಕೆ ಮಾತ್ರ ಪ್ರವೇಶ
  • ಸ್ಥಳೀಯ ಕಲಾವಿದರಿಗೆ ಕಾರ್ಯಕ್ರಮಕ್ಕೆ 2 ಗಂಟೆ ಮಿತಿ
  • ದಸರಾ ಸಮಾರಂಭದ ವೇಳೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
  • ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್​​ ಬಳಕೆ ಕಡ್ಡಾಯ
  • ಪ್ರಮುಖ ಆಕರ್ಷಣೆಯಾದ ಅರಮನೆ ದೀಪಾಲಂಕಾರ ಸಂಜೆ 7ರಿಂದ 10ರವರೆಗೆ ಮಾತ್ರ
  • ಅರಮನೆಯ ಸಿಬ್ಬಂದಿ, ಆಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ABOUT THE AUTHOR

...view details