ಮೈಸೂರು: ಇತ್ತೀಚೆಗೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದು ನಮಗೂ ಕೂಡ ಚಾಲೆಂಜಿಂಗ್ ಟೈಮ್ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದರು.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಮೈಸೂರು ಜಿಲ್ಲೆಯಲ್ಲಿ ಪ್ರತಿದಿನವೂ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗಾಗಲೇ 50 ಕ್ಕೂ ಹೆಚ್ಚು ಕಂಟೈನ್ಮೆಂಟ್ ಝೋನ್ ಗಳನ್ನು ಮಾಡಲಾಗಿದ್ದು, ಈ ಬಾರಿ ಕಂಟೈನ್ಮೆಂಟ್ ಝೋನ್ ಗಳು ಆಯಾ ಬೀದಿಗೆ ಮಾತ್ರ ಸೀಮಿತವಾಗಿರುತ್ತವೆ. ಅಪಾರ್ಟ್ಮೆಂಟ್, ಸ್ಲಂ ಏರಿಯಾಗಳಲ್ಲಿ ಬೇರೆ ರೀತಿಯ ಕಂಟೈನ್ಮೆಂಟ್ ಝೋನ್ಗಳನ್ನು ಮಾಡಲಾಗುತ್ತಿದ್ದು, ಜನರು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಧಾರ್ಮಿಕ ಸಮಾರಂಭಗಳಿಂದ ದೂರ ಇರಬೇಕು. ಜೊತೆಗೆ ಜನರು ಜಾಗೃತರಾಗಬೇಕೆಂದು ಎಂದರು.