ಕರ್ನಾಟಕ

karnataka

ETV Bharat / state

ಹುಣಸೂರು ಶಾಸಕರ ಆರೋಪಕ್ಕೆ ಪತ್ರದ ಮೂಲಕ ಉತ್ತರ ಕೊಟ್ಟ ಡಿಸಿ ರೋಹಿಣಿ ಸಿಂಧೂರಿ - ಶಾಸಕರ ಆರೋಪಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ

ಕೆಡಿಪಿ ಸಭೆ ನಡೆಸಿದ ನಂತರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹುಣಸೂರು ಶಾಸಕ ಹೆಚ್.ಪಿ. ಮಂಜುನಾಥ್ ಆರೋಪ ಮಾಡಿದ್ದರು. ಇದಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪತ್ರದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

DC Rohini Sindhuri reply to MLA H.P. Manjunath allegations
ಹುಣಸೂರು ಶಾಸಕರ ಆರೋಪಕ್ಕೆ ಪತ್ರದ ಮೂಲಕ ಉತ್ತರ ಕೊಟ್ಟ ಡಿಸಿ ರೋಹಿಣಿ ಸಿಂಧೂರಿ

By

Published : Nov 26, 2020, 12:21 PM IST

ಮೈಸೂರು:ಜಿಲ್ಲಾಧಿಕಾರಿ ವಿರುದ್ಧ ಹುಣಸೂರು ಶಾಸಕ ಹೆಚ್.ಪಿ. ಮಂಜುನಾಥ್ ಅವರ ಆರೋಪಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಹುಣಸೂರು ಶಾಸಕರ ಆರೋಪಕ್ಕೆ ಪತ್ರದ ಮೂಲಕ ಉತ್ತರ ಕೊಟ್ಟ ಡಿಸಿ ರೋಹಿಣಿ ಸಿಂಧೂರಿ

ಕೆಡಿಪಿ ಸಭೆ ನಡೆಸಿ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಹುಣಸೂರು ಶಾಸಕ ಹೆಚ್.ಪಿ ಮಂಜುನಾಥ್ 'ನಮಗೆ ಮಹಾರಾಣಿ ಬೇಡ, ‌ಇಬ್ಬರು ಮಹಾರಾಣಿಗಳು ಮೈಸೂರಿನಲ್ಲಿ‌ದ್ದಾರೆ. ಕೆಲಸ ಮಾಡುವ ಜಿಲ್ಲಾಧಿಕಾರಿ ಬೇಕು' ಎಂದು ಡಿಸಿ ವಿರುದ್ಧ ಗರಂ‌ ಆಗಿ ಹೇಳಿಕೆ ನೀಡಿದ್ದರು. ಇದಕ್ಕೆ ಪತ್ರದ ಮೂಲಕ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕ್ಷೇತ್ರದ ಅಭಿವೃದ್ಧಿ ಕಾರ್ಯ ಕುರಿತ ಯಾವ ಪತ್ರಗಳು ತಮ್ಮಿಂದ ಬಂದಿಲ್ಲ. ನಿಮ್ಮ ವೈಯಕ್ತಿಕ ಹೆಸರಿನಲ್ಲಿ ಹಲವು ಅರ್ಜಿಗಳಿದ್ದು, ಅವು ಮೈಸೂರು ತಾಲೂಕಿನಲ್ಲಿ ಕೇರ್ಗಳಿ ಗ್ರಾಮದ ಹಲವು ಸರ್ವೆ ನಂಬರ್ ಗಳ ಭೂ ಪರಿವರ್ತನೆ ಅರ್ಜಿಗಳಾಗಿವೆ. ಆ ಅರ್ಜಿಗಳ ವಿಲೇವಾರಿ ಕಾನೂನು ಪ್ರಕಾರ ಮಾಡುತ್ತೇವೆ ಎಂದು ಉತ್ತರಿಸಿದ್ದಾರೆ.

ಹುಣಸೂರು ಶಾಸಕರ ಆರೋಪಕ್ಕೆ ಪತ್ರದ ಮೂಲಕ ಉತ್ತರ ಕೊಟ್ಟ ಡಿಸಿ ರೋಹಿಣಿ ಸಿಂಧೂರಿ

ಗಜಪಯಣದಲ್ಲಿ ಯಾವುದೇ ಶಿಷ್ಟಚಾರ ಉಲ್ಲಂಘನೆ ಆಗಿಲ್ಲ, ದಸರಾ ಉನ್ನತ ಸಮಿತಿ ಸಭೆ ತೀರ್ಮಾನದಂತೆ ನಡೆದುಕೊಳ್ಳಲಾಗಿದೆ. ಹುಣಸೂರಿಗೆ ಪ್ರಗತಿ ಪರಿಶೀಲನೆಗೆ ಭೇಟಿ ನೀಡಿದ್ದಾಗ ತಾವು ಅನಾರೋಗ್ಯದಿಂದ ಇದ್ದ ಕಾರಣ ನಿಮ್ಮ ಜೊತೆ ಚರ್ಚೆ ಸಾಧ್ಯವಾಗಿಲ್ಲ. ಕೆಡಿಪಿ ಸಭೆಯಲ್ಲಿ ನೀವು ನೀಡಿರುವ ಹೇಳಿಕೆ ಯಾರಿಗೂ ಶೋಭೆ ತರುವುದಿಲ್ಲ. ಹೇಳಿಕೆ ನೀಡುವ ಮುನ್ನ ವಾಸ್ತವಾಂಶ ಗಮನಿಸಿ ಹೇಳಿಕೆ ನೀಡಿ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪತ್ರದ ಮೂಲಕ ಶಾಸಕ ಹೆಚ್.ಪಿ. ಮಂಜುನಾಥ್ ಅವರಿಗೆ ಉತ್ತರ ನೀಡಿದ್ದಾರೆ.

ಓದಿ:ಬೈಕ್​ಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವು

For All Latest Updates

TAGGED:

ABOUT THE AUTHOR

...view details