ಮೈಸೂರು:ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದೆ ಎಂದು ಆರೋಗ್ಯ ಸಚಿವರೇ ಘೋಷಣೆ ಮಾಡಿದ್ದಾರೆ. ಸರ್ಕಾರ ಯಾವ ಗೈಡ್ಲೈನ್ಸ್ ಹೊರಡಿಸಿದೆ. ಅದರ ಪ್ರಕಾರವೇ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 500 ಜನರಿಗಿಂತ ಹೆಚ್ಚಾಗಿ ಎಲ್ಲಿಯೂ ಜನ ಸೇರಬಾರದು. ಇದೇ ಕಾರಣಕ್ಕೆ ನಾವು ಎಲ್ಲ ಜಾತ್ರೆ, ಉತ್ಸವಗಳನ್ನ ರದ್ದು ಮಾಡಿದ್ದೇವೆ. ಜನರು ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ನಂಜನಗೂಡು ಜಾತ್ರೆಗೆ 500 ಮಂದಿ ಭಾಗಿಯಾಗಲು ಅನುಮತಿ ನೀಡಿದ್ದೇವೆ. ಲಕ್ಷಾಂತರ ಜನ ಬಂದು ಜಾತ್ರೆ ಮಾಡೋಕೆ ಆಗೋಲ್ಲ. ಅದರ ನಂತರದ ಪರಿಸ್ಥಿತಿ ನಿಭಾಯಿಸಲು ನಮಗೆ ಕಷ್ಟ ಆಗುತ್ತೆ. ಜಾತ್ರೆಯನ್ನ ಮುಂದಿನ ವರ್ಷ ಮಾಡಬಹುದು. ಆದರೆ ಜೀವನ ಉಳಿಸಿಕೊಳ್ಳುವುದು ಮುಖ್ಯ ಆಗಿದೆ ಎಂದರು.